ADVERTISEMENT

'ಹೊನ್ನಾವರ ಬಂದರು ವಾಸ್ತವ' ವರದಿ ಬಿಡುಗಡೆ 4ರಂದು

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2025, 2:08 IST
Last Updated 2 ನವೆಂಬರ್ 2025, 2:08 IST
ಹೊನ್ನಾವರ ತಾಲ್ಲೂಕಿನ ಕಾಸರಕೋಡ ಟೊಂಕದಲ್ಲಿ ಬಂದರು ನಿರ್ಮಾಣಕ್ಕೆ ಜಲ್ಲಿಕಲ್ಲುಗಳನ್ನು ಹಾಕಿರುವುದು
ಹೊನ್ನಾವರ ತಾಲ್ಲೂಕಿನ ಕಾಸರಕೋಡ ಟೊಂಕದಲ್ಲಿ ಬಂದರು ನಿರ್ಮಾಣಕ್ಕೆ ಜಲ್ಲಿಕಲ್ಲುಗಳನ್ನು ಹಾಕಿರುವುದು   

ಹೊನ್ನಾವರ: ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಪ್ ಟ್ರೇಡ್ ಯೂನಿಯನ್ಸ್, ಪ್ರೈಡೇಸ್ ಫಾರ್ ಫ್ಯೂಚರ್ ಕರ್ನಾಟಕ ಹಾಗೂ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟಿಸ್‌ ಜಂಟಿಯಾಗಿ ಪ್ರಕಟಿಸಿರುವ ಹೊನ್ನಾವರ ಬಂದರು ಯೋಜನೆಯ ಕುರಿತಾದ ವಾಸ್ತವ ಶೋಧನಾ ವರದಿಯ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನ.4ರಂದು ಸಂಜೆ 5ಕ್ಕೆ ನಡೆಯಲಿದೆ.

ಪರಿಸರ ಕಾರ್ಯಕರ್ತೆ ಮೇಧಾ ಪಾಟ್ಕರ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಹೊನ್ನಾವರದಲ್ಲಿ ಖಾಸಗಿ ಬಂದರು ನಿರ್ಮಾಣದ ವಿರುದ್ಧ ನಡೆದ ಪ್ರತಿಭಟನೆ, ಮೀನುಗಾರರ ಪಾರಂಪರಿಕ ಕಸುಬಿಗೆ ಉಂಟಾಗಿರುವ ತೊಂದರೆ. ವಾಸ್ತವ್ಯದ ಮನೆಗಳ ನಾಶ ಮೊದಲಾದ ಸಂಗತಿಗಳಿಗೆ ಸಂಬಂಧಿಸಿದಂತೆ ಹೋರಾಟಗಾರರು ಹಾಗೂ ವಕೀಲರ ತಂಡ ಸ್ಥಳಕ್ಕೆ ಭೇಟಿ ಕೊಟ್ಟು ಸಂಗ್ರಹಿಸಿರುವ ವಿಷಯ ವರದಿಯಲ್ಲಿ ಅನಾವರಣಗೊಳ್ಳಲಿದೆ' ಎಂದು ಸಂಶೋಧಕ ಪ್ರಕಾಶ ಮೇಸ್ತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT