ADVERTISEMENT

ತೋಟಗಾರಿಕೆ ಇಲಾಖೆ: ಸಹಾಯಧನ ಪಡೆಯಲು ಅವಕಾಶ

​ಪ್ರಜಾವಾಣಿ ವಾರ್ತೆ
Published 9 ಜೂನ್ 2025, 15:45 IST
Last Updated 9 ಜೂನ್ 2025, 15:45 IST

ಸಿದ್ದಾಪುರ: ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ 2025-26ನೇ ಸಾಲಿನಲ್ಲಿ ಸಿದ್ದಾಪುರ ತಾಲ್ಲೂಕಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಅನಾನಸ್ ಪ್ರದೇಶ ವಿಸ್ತರಣೆ, ಕಾಳುಮೆಣಸು ಪ್ರದೇಶ ವಿಸ್ತರಣೆ, ಗೇರು ಪ್ರದೇಶ ವಿಸ್ತರಣೆ, ಕಾಳುಮೆಣಸು ಪುನಶ್ಚೇತನ, ಪ್ಲಾಸ್ಟಿಕ್ ಹೊದಿಕೆ ಖರೀದಿ, ಕಳೆ ಚಾಪೆ ಖರೀದಿ, ಸಸ್ಯ ಸಂರಕ್ಷಣೆ ಔಷಧ ಖರೀದಿಗೆ ಸಹಾಯಧನ ಸೌಲಭ್ಯ ನೀಡಲು ಅವಕಾಶವಿದೆ.

ಉಳಿದಂತೆ ತೋಟಗಾರಿಕೆಗೆ ಸಂಬಂಧಿಸಿ ಯಾವುದೇ ಚಟುವಟಿಕೆಗಳ ಬಗ್ಗೆ ಆಸಕ್ತಿ ಹೊಂದಿದ್ದಲ್ಲಿ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ, ಸಿದ್ದಾಪುರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT