ಕಾರವಾರ: ಜಿಲ್ಲೆಯಾದ್ಯಂತ ಏ.27ರ ವರೆಗೆ ಒಣಹವೆಯ ಪ್ರಮಾಣ ಹೆಚ್ಚಳವಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ನಾಲ್ಕು ದಿನಗಳ ಕಾಲ ಜಿಲ್ಲೆಯ ಕರಾವಳಿ ಭಾಗದಲ್ಲಿ ಗರಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್ನಷ್ಟು ಏರಿಕೆಯಾಗಲಿದೆ. ಬಿಸಿ ಮತ್ತು ಆರ್ದೃತೆಯ ವಾತಾವರಣವೂ ಹೆಚ್ಚಲಿದ್ದು ಸೆಕೆ ಇರಲಿದೆ ಎಂದು ತಿಳಿಸಿದೆ. ತಾಪಮಾನ ಏರಿಕೆಯಾಗಲಿರುವುದರಿಂದ ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.