ಶಿರಸಿ: ಅಡಿಕೆ, ರಿಯಲ್ ಎಸ್ಟೇಟ್ ಉದ್ಯಮ ಸೇರಿ ಹಲವು ಕಾರ್ಯಚಟುವಟಿಕೆ ನಡೆಸುತ್ತಿದ್ದ ನಗರದ ಕೆಲ ಉದ್ಯಮಿಗಳ ಮನೆ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿ, ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಕೆಪಿಸಿಸಿ ಸದಸ್ಯ, ಕಾಂಗ್ರೆಸ್ ಉತ್ತರ ಕನ್ನಡ ಜಿಲ್ಲಾ ಘಟಕದ ಮಾಧ್ಯಮ ವಕ್ತಾರ ದೀಪಕ್ ದೊಡ್ಡೂರು, ತೋಟಗಾರ್ಸ್ ಸೇಲ್ ಸೊಸೈಟಿ (ಟಿಎಸ್ಎಸ್) ಸಂಸ್ಥೆಯ ಮಾಜಿ ವ್ಯವಸ್ಥಾಪಕ ಹಾಗೂ ಉದ್ಯಮಿ ರವೀಶ ಹೆಗಡೆ, ಸಂಸ್ಥೆಯ ನಿರ್ದೇಶಕ ರಾಮಕೃಷ್ಣ ಹೆಗಡೆ ಕಡವೆ, ಪ್ರವೀಣ ಹೆಗಡೆ ಹೀಪನಳ್ಳಿಯವರ ಮನೆ ಮತ್ತು ಅಡಿಕೆ ವ್ಯಾಪಾರಿ ಶಿವರಾಮ ಹೆಗಡೆ ಅವರ ಅಡಿಕೆ ಮಂಡಿ ಮೇಲೆ ದಾಳಿ ನಡೆದಿದೆ. ಅಧಿಕಾರಿಗಳು ಮಾಹಿತಿ ಸಂಗ್ರಹಿಸುವುದರ ಜೊತೆಗೆ ದಾಖಲೆಗಳನ್ನು ವಶಪಡಿಸಿಕೊಂಡರು.
‘ಟಿಎಸ್ಎಸ್ನಲ್ಲಿರುವ ಸೇಫ್ ಲಾಕರ್ ತೆರೆಸಿ, ಪ್ರವೀಣ ಹೆಗಡೆ ಅವರಿಗೆ ಸಂಬಂಧಪಟ್ಟ ಹೆಚ್ಚಿನ ಸ್ವತ್ತು, ದಾಖಲೆ ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬೆಳಿಗ್ಗೆ 7ರಿಂದ ಆರಂಭಿಸಿದ ಐಟಿ ಅಧಿಕಾರಿಗಳ ಕಾರ್ಯಾಚರಣೆ ರಾತ್ರಿಯವರೆಗೆ ಮುಂದುವರೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.