ಕಾರವಾರ: ನಗರ ಹಾಗೂ ಸುತ್ತಮುತ್ತ ಬುಧವಾರ ಬೆಳಗಿನ ಜಾವದಿಂದ ಆಗಾಗ ಜೋರಾಗಿ ಮಳೆಯಾಗುತ್ತಿದೆ. ಆಗಾಗ ರಭಸದ ಗಾಳಿಯೂ ಜೊತೆಯಾಗುತ್ತಿದೆ. ತಗ್ಗಿನಲ್ಲಿರುವ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ.
ಮೀನುಗಾರರು ಸಮುದ್ರಕ್ಕಿಳಿದಿಲ್ಲ. ಈಗಾಗಲೇ ಮೀನುಗಾರಿಕೆಗೆ ತೆರಳಿದ್ದ ಮಂಗಳೂರು, ಮಲ್ಪೆ, ಗೋವಾದ ದೋಣಿಗಳು ಕಾರವಾರದ ಬೈತಖೋಲ್ ಬಂದರಿಗೆ ವಾಪಸಾಗಿ ಲಂಗರು ಹಾಕಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.