ADVERTISEMENT

ಕುಮಟಾ ಕ್ಷೇತ್ರ: ನಾಮಪತ್ರ ಹಿಂಪಡೆದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಾರದಾ ಶೆಟ್ಟಿ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2023, 6:55 IST
Last Updated 24 ಏಪ್ರಿಲ್ 2023, 6:55 IST
ಶಾರದಾ ಶೆಟ್ಟಿ
ಶಾರದಾ ಶೆಟ್ಟಿ    

ಕುಮಟಾ: 'ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರವಾಣಿ ಕರೆ ಮಾಡಿ ನಾಮಪತ್ರ ಹಿಂಪಡೆಯುವಂತೆ ಕೇಳಿದರು. ಎಂ.ಎಲ್.ಸಿ. ಅಥವಾ ನಿಗಮ ಮಂಡಳಿ ಅಧ್ಯಕ್ಷ ಹುದ್ದೆ ಕೊಡುವುದಾಗಿಯೂ ಭರವಸೆ ಕೊಟ್ಟರು. ಆದರೆ ನಾನು ರಾಜಕೀಯವಾಗಿಯೇ ನಿವೃತ್ತಿ ಪಡೆಯಲು ಬಯಸಿದ್ದೇನೆ' ಎಂದು ಕಾಂಗ್ರೆಸ್'ಗೆ ಬಂಡಾಯ ಸಾರಿ ಸ್ಪರ್ಧಿಸಲು ಮುಂದಾಗಿದ್ದ ಮಾಜಿ ಶಾಸಕಿ ಶಾರದಾ ಶೆಟ್ಟಿ ಹೇಳಿದರು.

ಪಟ್ಟಣದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿದ ಅವರು, 'ಪಕ್ಷಕ್ಕಾಗಿ ಹಲವು ವರ್ಷದಿಂದ ನಾನು ಮತ್ತು ನಮ್ಮ ಕುಟುಂಬದವರು ಕೆಲಸ ಮಾಡಿದ್ದೇವೆ. ಆದರೆ ಪಕ್ಷ ಟಿಕೆಟ್ ನೀಡದಿರುವುದು ನೋವುಂಟು ಮಾಡಿದೆ. ಪಕ್ಷದ ನಿರ್ಧಾರದಿಂದ ಬಹಳಷ್ಟು ನೊಂದಿದ್ದೇನೆ' ಎಂದರು.

'ರಾಜಕೀಯ ನಿವೃತ್ತಿ ಪಡೆದ ಮೇಲೆ ಯಾರೊಬ್ಬರಿಗೂ ಬೆಂಬಲಿಸುವ ಪ್ರಮೇಯವೇ ಇಲ್ಲ. ನಮ್ಮ ಬೆಂಬಲಿಗರು ಯಾರನ್ನಾದರೂ ಬೆಂಬಲಿಸಲು ಸ್ವತಂತ್ರರು. ಪುತ್ರ ರವಿಕುಮಾರ್ ರಾಜಕೀಯ ನಿರ್ಧಾರ ಕೈಗೊಳ್ಳಲು ಸ್ವತಂತ್ರರು' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.