ಕುಮಟಾ (ಉತ್ತರ ಕನ್ನಡ): ಶಾಸಕ ದಿನಕರ ಶೆಟ್ಟಿ ಅವರಿಗೆ ಕೋವಿಡ್ 19 ಭಾನುವಾರ ದೃಢಪಟ್ಟಿದೆ.
ಅವರು ಸ್ವಯಂ ಪ್ರೇರಿತರಾಗಿ ಆಸ್ಪತ್ರೆಗೆ ಹೋಗಿ ಕೋವಿಡ್ ಆ್ಯಂಟಿಜೆನ್ ಪರೀಕ್ಷೆ ಮಾಡಿಸಿಕೊಂಡಿದ್ದರು. ಈ ವೇಳೆ ಅವರಿಗೆ ಕೋವಿಡ್ ದೃಢಪಟ್ಟಿದೆ ಎಂದು ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಗಣೇಶ ನಾಯ್ಕ ತಿಳಿಸಿದರು.
ಅವರ ಆಪ್ತ ಸಹಾಯಕ ಅಶೋಕ ಭಟ್, ಕಾರು ಚಾಲಕ ಪ್ರಭಾಕರ, ಪತ್ನಿ, ಪುತ್ರಿ ಅವರ ಕೋವಿಡ್ ವರದಿಯು ನೆಗೆಟಿವ್ ಬಂದಿದೆ. ‘ಅನಾರೋಗ್ಯದ ಯಾವ ಲಕ್ಷಣಗಳೂ ನನಗೆ ಕಾಣಿಸಿಕೊಂಡಿಲ್ಲ. ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಹೋಗುತ್ತಿದ್ದೇನೆ’ ಎಂದು ದಿನಕರ ಶೆಟ್ಟಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.