ADVERTISEMENT

ದಾಂಡೇಲಿ: ಕಾರ್ಮಿಕ ಮುಖಂಡ ಹರೀಶ್ ನಾಯ್ಕ ನಿಧನ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2023, 7:38 IST
Last Updated 7 ಆಗಸ್ಟ್ 2023, 7:38 IST
ಹರೀಶ್ ನಾಯ್ಕ
ಹರೀಶ್ ನಾಯ್ಕ   

ದಾಂಡೇಲಿ: ಕಾರ್ಮಿಕ ಮುಖಂಡ ಹಾಗೂ ಜನಪರ ಹೋರಾಟಗಾರ ಹರೀಶ್ ನಾಯ್ಕ (71) ಸೋಮವಾರ ಬೆಳಗ್ಗೆ ರಾಮನಗರದ ಸ್ವಗೃಹದಲ್ಲಿ ನಿಧನರಾದರು.

ಮೃತರಿಗೆ ಪತ್ನಿ, ಓರ್ವ ಪುತ್ರ ಇದ್ದಾರೆ.

ಮೃತರ ದೇಹವನ್ನು ಧಾರವಾಡ ಎಸ್. ಡಿ.ಎಮ್. ಆಸ್ಪತ್ರೆಗೆ ದಾನ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ADVERTISEMENT

ದಾಂಡೇಲಿಯ ವೆಸ್ಟ್ ಕೋಸ್ಟ್ ಕಾಗದ ಕಂಪನಿಯಲ್ಲಿ ಉದ್ಯೋಗಿಯಾಗಿ ನಿವೃತ್ತಿಯಾಗಿದ್ದರು.

ಹಳಿಯಾಳ-ದಾಂಡೇಲಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ದಾಂಡೇಲಿ ನಗರಸಭೆಯ ಮಾಜಿ ಉಪಾಧ್ಯಕ್ಷರಾಗಿ ಕೆಲಸ ಮಾಡಿದ್ದರು. ಲೇಖಕರಾಗಿಯೂ ಗುರುತಿಸಿಕೊಂಡಿದ್ದರು.

ಉತ್ತಮ ವಾಗ್ಮಿ, ಕಾರ್ಮಿಕ ನಾಯಕರಾಗಿದ್ದ ಅವರು ಹಲವಾರು ಜನಪರ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು.

ಸಿ.ಐ.ಟಿ.ಯು ಸಂಘಟನೆ, ಸಿ.ಪಿ.ಐ.ಎಮ್ ಪಕ್ಷದಲ್ಲಿ ಸಕ್ರಿಯವಾಗಿದ್ದರು. ಮುನ್ಸಿಪಲ್ ಕಾರ್ಮಿಕರ ಸಂಘಟನೆಯ ರಾಜ್ಯಾಧ್ಯಕ್ಷರೂ ಆಗಿದ್ದರು.

ಸಿಐಟಿಯು, ಡಿವೈಎಫ್ಐ, ಜನವಾದಿ ಮಹಿಳಾ ಸಂಘಟನೆಯ ಪ್ರಮುಖರು ಸಂತಾಪ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.