ಹೊನ್ನಾವರ: ತಾಲ್ಲೂಕಿನ ಹಡಿನಬಾಳದಲ್ಲಿ ಉರುಳಿಗೆ ಬಿದ್ದು ಚಿರತೆಯೊಂದು ಶನಿವಾರ ಮೃತಪಟ್ಟಿದೆ. ಬೆಳೆಗೆ ಹಾನಿ ಮಾಡುತ್ತಿದ್ದ ಕಾಡುಹಂದಿಯನ್ನು ಹಿಡಿಯಲೆಂದು ತಂತಿಯ ಉರುಳು ಇಡಲಾಗಿತ್ತು.
ಒಂದು ವರ್ಷದ ಹೆಣ್ಣು ಚಿರತೆ ಇದಾಗಿದೆ. ಸ್ಥಳಕ್ಕೆ ವಲಯ ಅರಣ್ಯ ಸಂರಕ್ಷಣಾಧಿಕಾರಿ ವಿಕ್ರಂ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.