ಭಟ್ಕಳ: ತಾಲ್ಲೂಕಿನ ಬೆಳಕೆ ವಲಯದ ಕೆಕ್ಕೋಡಿನಲ್ಲಿ ಭಾನುವಾರ ಗಂಡು ಚಿರತೆಯೊಂದು ವಿದ್ಯುತ್ ಆಘಾತದಿಂದ ಮೃತಪಟ್ಟಿದೆ.
ಮಂಗನನ್ನು ಬೇಟೆಯಾಡಲು ಮರವನ್ನೇರಿದ್ದ ಚಿರತೆಯ ಬಾಲವು ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಘಟನೆ ನಡೆದಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
‘ಚಿರತೆಗೆ ಸುಮಾರು 10 ವರ್ಷಗಳಾಗಿರಬಹುದು. ಅದರ ಬಾಲದ ಕೂದಲು ವಿದ್ಯುತ್ ಲೈನ್ನಲ್ಲಿ ಅಂಟಿಕೊಂಡಿದೆ. ಅಲ್ಲದೇ ಬಾಲದ ತುದಿಯಲ್ಲಿ ಸುಟ್ಟಿರುವ ಗುರುತಿದೆ. ಅದರ ಒಂದು ಉಗುರು ಕಾಣೆಯಾಗಿದ್ದು, ನೋವಿನಿಂದ ಮರವನ್ನು ಪರಚಿಕೊಂಡು ಕೆಳಗೆ ಇಳಿಯುವಾಗ ಕಳಚಿರುವ ಸಾಧ್ಯತೆಯಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ವಲಯ ಅರಣ್ಯ ಸಂರಕ್ಷಣಾಧಿಕಾರಿ ಸವಿತಾ ದೇವಾಡಿಗ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.