ಸಿದ್ದಾಪುರ: ತಾಲೂಕಿನ ಇಟಗಿ ಮುಸೇಗಾರಿನ ರಾಮಚಂದ್ರ ಎನ್.ಹೆಗಡೆ ಅವರ ಸಾಕು ನಾಯಿಯನ್ನು ಶುಕ್ರವಾರ ಬೆಳಗಿನ ಜಾವ ಕಪ್ಪು ಚಿರತೆಯೊಂದು ಹೊತ್ತೊಯ್ದಿದೆ.
ಭಾರೀ ಗಾತ್ರದ ನಾಯಿ ಸಾಕುತ್ತಿರುವ ಇವರ ಮನೆಯಲ್ಲಿ ಇಂತಹ ಘಟನೆಗಳು ಆಗಾಗ ಸಂಭವಿಸುತ್ತಿವೆ. ಹಿಂದಿನ ವರ್ಷವೂ ಸಾಕು ನಾಯಿಯನ್ನು ಚಿರತೆ ಹೊತ್ತೊಯ್ದಿತ್ತು. ಈ ವರ್ಷ ಮೇ 22ರ ರಾತ್ರಿಯೂ ಚಿರತೆ ಬಂದು ನಾಯಿಯನ್ನು ಹೊತ್ತೊಯ್ದಿತ್ತು. ಇದೀಗ ಪುನಃ ಶುಕ್ರವಾರ ಬೆಳಗಿನ ಜಾವ ಚಿರತೆ ನಾಯಿಯನ್ನು ಹೊತ್ತೊಯ್ಯುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಭಾಗದ ಜನತೆ ಚಿರತೆ ದಾಳಿಯಿಂದಾಗಿ ಭಯಭೀತರಾಗಿದ್ದು ಅರಣ್ಯ ಇಲಾಖೆ ಈ ಕುರಿತು ನಿಗಾ ವಹಿಸುವಂತೆ ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.