ADVERTISEMENT

ಆದೇಶ ಉಲ್ಲಂಘಿಸಿ ಕಾಮಗಾರಿ: ಆರೋಪ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2020, 14:18 IST
Last Updated 6 ಏಪ್ರಿಲ್ 2020, 14:18 IST

ಶಿರಸಿ: ಲಾಕ್‌ಡೌನ್ ಆದೇಶದ ನಡುವೆಯೇ ತಾಲ್ಲೂಕಿನ ಜಾನ್ಮನೆ ಗ್ರಾಮ ಪಂಚಾಯ್ತಿಯ ಪಿಡಿಒ, ಸೋಮವಾರ ಕಾರ್ಮಿಕರಿಂದ ಕಾಮಗಾರಿ ಮಾಡಿಸಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ. ಪಿಡಿಒ ಕೃಷ್ಣಪ್ಪ ಅವರು, ಸ್ಥಳೀಯ ಕಾಂಕ್ರೀಟ್ ರಸ್ತೆಯೊಂದರ ಕಾಮಗಾರಿ ಮಾಡಿಸಿದ್ದಾರೆ. ಈ ಸಂದರ್ಭದಲ್ಲಿ ಸಾಮಾಜಿಕ ಅಂತರದ ನಿಯಮವೂ ಪಾಲನೆಯಾಗಿಲ್ಲ, ಕಾರ್ಮಿಕರು ಮಾಸ್ಕ್ ಧರಿಸಿರಲಿಲ್ಲ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಯ ಬಗ್ಗೆ ಪರಿಶೀಲನೆ ನಡೆಸಿ, ಲಾಕ್‌ಡೌನ್ ಆದೇಶ ಉಲ್ಲಂಘನೆ ಆಗಿದ್ದು ಕಂಡುಬಂದಲ್ಲಿ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉಪವಿಭಾಗಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT