ಹೊನ್ನಾವರ: ಇಲ್ಲಿಯ ಎಸ್.ಡಿ.ಎಂ.ಕಾಲೇಜಿನ ಬಿ.ಎ.ಐದನೇ ಸೆಮಿಸ್ಟರ್ ವಿದ್ಯಾರ್ಥಿ ಮದನ್ ಮೊಗೇರ ಕರ್ನಾಟಕ ವಿಶ್ವವಿದ್ಯಾಲಯದ ವಾಲಿಬಾಲ್ ತಂಡಕ್ಕೆ ಆಯ್ಕೆಯಾಗಿ ‘ಯುನಿವರ್ಸಿಟಿ ಬ್ಲೂ’ ಗೌರವಕ್ಕೆ ಪಾತ್ರರಾಗಿದ್ದಾರೆ.
ಡಿ.7ರಿಂದ 9ರ ವರೆಗೆ ಧಾರವಾಡದಲ್ಲಿ ನಡೆದ ಕವಿವಿ ಏಕವಲಯ ಪುರುಷರ ವಾಲಿಬಾಲ್ ಪಂದ್ಯಾವಳಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಮದನ್ ಮೊಗೇರ ದಕ್ಷಿಣ ಭಾರತ ವಿಶ್ವವಿದ್ಯಾಲಯ ಮಟ್ಟದ ವಾಲಿಬಾಲ್ ಟೂರ್ನಿಯಲ್ಲಿ ಕವಿವಿ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಆರ್.ಕೆ.ಮೇಸ್ತ ತರಬೇತಿ ನೀಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.