ಗೋಕರ್ಣ: ಇಲ್ಲಿಯ ಮೇನ್ ಬೀಚಿನ ಕರಿಯಪ್ಪಕಟ್ಟೆಯ ಬಳಿ, ಶನಿವಾರ ಬೆಳ್ಳಿಗೆ ಸಮುದ್ರದಲ್ಲಿ ಈಜಾಡಲು ಇಳಿದ ಬಿಹಾರ ಮೂಲದ ಪ್ರವಾಸಿಗರೊಬ್ಬರು ಅಲೆಯ ರಭಸಕ್ಕೆ ಸಿಕ್ಕಿ ಮೃತಪಟ್ಟಿದ್ದಾರೆ.
ಕುಮಾರ ಅಭಿಷೇಕ್ (28) ಮೃತಪಟ್ಟ ಪ್ರವಾಸಿಗರಾಗಿದ್ದಾರೆ. ಇವರು ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದು, 4 ಜನ ಗೆಳೆಯರೊಂದಿಗೆ ಗೋಕರ್ಣಕ್ಕೆ ಬಂದಿದ್ದರು. ಇಲ್ಲಿಯ ಖಾಸಗಿ ವಸತಿ ಗೃಹದಲ್ಲಿ ಉಳಿದಿದ್ದರು. ಶನಿವಾರ ಮುಂಜಾನೆ ಗೆಳೆಯರೊಂದಿಗೆ ಸಮುದ್ರದಲ್ಲಿ ಈಜಾಡಲು ತೆರಳಿದಾಗ ಈ ಘಟನೆ ನಡೆದಿದೆ. ಕೂಡಲೇ ದಡಕ್ಕೆ ತಂದು ರಕ್ಷಿಸಲು ನೋಡಿದರೂ ಯಾವುದೇ ಪ್ರಯೋಜನವಾಗಿಲ್ಲ.
ಗೋಕರ್ಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.