ಶಿರಸಿ: ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರು ಕಂಪನಿಯೊಂದರ ಸ್ಥಳೀಯ ವ್ಯವಸ್ಥಾಪಕರೊಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾದ ಸುದ್ದಿ ನಗರದೆಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.
ದೀನ್ ದಯಾಳ ಉಪಾಧ್ಯಾಯ ಗ್ರಾಮೀಣ ವಿದ್ಯುದೀಕರಣ ಯೋಜನೆಯಡಿ ಜೊಯಿಡಾ ತಾಲ್ಲೂಕಿನ ಬಜಾರ್ ಕುಣಾಂಗ್ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕ ನೀಡಲು ಆಗುತ್ತಿರುವ ವಿಳಂಬದ ಕುರಿತು ಚರ್ಚಿಸಲು, ಕಾಮಗಾರಿ ಗುತ್ತಿಗೆ ಪಡೆದಿದ್ದ ಬಜಾಜ್ ಎಲೆಕ್ಟ್ರಾನಿಕ್ಸ್ ಕಂಪನಿಯ ಸ್ಥಳೀಯ ವ್ಯವಸ್ಥಾಪಕರನ್ನು, ಸಚಿವರು ಭಾನುವಾರ ಮನೆಗೆ ಕರೆದಿದ್ದರು. ಈ ಸಂದರ್ಭ ಪರಿಸ್ಥಿತಿ ಕೈ ಮೀರಿ, ಕಂಪನಿ ವ್ಯವಸ್ಥಾಪಕರ ಮೇಲೆ ಸಚಿವರು ಹಲ್ಲೆ ನಡೆಸಿದ್ದು, ನಂತರ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ ಎಂಬುದು ಚರ್ಚೆಯಲ್ಲಿರುವ ಸಂಗತಿ.
ಹಲ್ಲೆಗೊಳಗಾಗಿರುವ ವ್ಯಕ್ತಿಯನ್ನು ಪೊಲೀಸರು ಠಾಣೆಗೆ ಕರೆಯಿಸಿ, ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ, ಈ ಕುರಿತು ದೂರು ದಾಖಲಾಗಿಲ್ಲ.
ಇದನ್ನೂ ಓದಿ:ವೈದ್ಯರ ಥಳಿಸಿದ ಸಂಸದ ಅನಂತಕುಮಾರ ಹೆಗಡೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.