ADVERTISEMENT

ಕೃಷಿ ಸಚಿವರಿಂದ ಆತ್ಮಲಿಂಗಕ್ಕೆ ಪೂಜೆ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2020, 15:42 IST
Last Updated 16 ಡಿಸೆಂಬರ್ 2020, 15:42 IST
ಗೋಕರ್ಣದ ಮಹಾಬಲೇಶ್ವರನ ಆತ್ಮಲಿಂಗಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಹಾಗೂ ಅವರ ಕುಟುಂಬದ ಸದಸ್ಯರು ಬುಧವಾರ ಪೂಜೆ ಸಲ್ಲಿಸಿದರು
ಗೋಕರ್ಣದ ಮಹಾಬಲೇಶ್ವರನ ಆತ್ಮಲಿಂಗಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಹಾಗೂ ಅವರ ಕುಟುಂಬದ ಸದಸ್ಯರು ಬುಧವಾರ ಪೂಜೆ ಸಲ್ಲಿಸಿದರು   

ಗೋಕರ್ಣ: ಕೃಷಿ ಸಚಿವ ಬಿ.ಸಿ.ಪಾಟೀಲ್ ಕುಟುಂಬ ಸಮೇತ ಬುಧವಾರ ಗೋಕರ್ಣಕ್ಕೆ ಭೇಟಿ ನೀಡಿ, ಮಹಾಬಲೇಶ್ವರನ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದರು.

ಖಾಸಗಿ ಕಾರ್ಯಕ್ರಮದ ನಿಮಿತ್ತ ಬಂದಿದ್ದ ಅವರು, ಮಹಾಗಣಪತಿ ಹಾಗೂ ಮಹಾಬಲೇಶ್ವರ ದೇವಸ್ಥಾನಗಳಲ್ಲಿ ಪೂಜೆ, ರುದ್ರಾಭಿಷೇಕ, ಮಹಾಮಂಗಳಾರತಿಯನ್ನು ನೆರವೇರಿಸಿದರು. ದೇವಸ್ಥಾನದ ಆಡಳಿತ ಮಂಡಳಿ ಎಲ್ಲ ಪೂಜಾ ಕೈಂಕರ್ಯಗಳನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಸದಸ್ಯ ಮಹೇಶ ಶೆಟ್ಟಿ, ಕುಮಟಾ ಎ.ಪಿ.ಎಂ.ಸಿ. ಅಧ್ಯಕ್ಷ ರಮೇಶ ಪ್ರಸಾದ, ಸಾಮಾಜಿಕ ಕಾರ್ಯಕರ್ತ ಶಂಕರ ಗೋಪಿ, ಬಿ.ಜೆ.ಪಿ ಮುಖಂಡ ನಾಗರಾಜ ಹಿತ್ತಲಮಕ್ಕಿ, ಗ್ರಾಮ ಪಂಚಾಯಿತಿ ಸದಸ್ಯ ಗಣಪತಿ ನಾಯ್ಕ, ಪ್ರಭಾಕರ ಪ್ರಸಾದ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.