ADVERTISEMENT

ವಿಶ್ವೇಶ್ವರ ಹೆಗಡೆ ಕಾಗೇರಿ ಪುತ್ರಿ ಆರತಕ್ಷತೆಗೆ ಬಂದ ಸಚಿವರ ದಂಡು

ಕಾಗೇರಿ ಪುತ್ರಿ ಆರತಕ್ಷತೆ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2019, 13:28 IST
Last Updated 10 ಡಿಸೆಂಬರ್ 2019, 13:28 IST
ವಿಶ್ವೇಶ್ವರ ಹೆಗಡೆ ಕಾಗೇರಿ–ಭಾರತಿ ದಂಪತಿಯ ಪುತ್ರಿ ಜಯಲಕ್ಷ್ಮಿ–ಆದಿತ್ಯ ಅವರ ಮದುವೆ ಆರತಕ್ಷತೆಯಲ್ಲಿ ಭಾಗವಹಿಸಿದ್ದ ಕಾಗೋಡು ತಿಮ್ಮಪ್ಪ, ಶಂಕರಮೂರ್ತಿ
ವಿಶ್ವೇಶ್ವರ ಹೆಗಡೆ ಕಾಗೇರಿ–ಭಾರತಿ ದಂಪತಿಯ ಪುತ್ರಿ ಜಯಲಕ್ಷ್ಮಿ–ಆದಿತ್ಯ ಅವರ ಮದುವೆ ಆರತಕ್ಷತೆಯಲ್ಲಿ ಭಾಗವಹಿಸಿದ್ದ ಕಾಗೋಡು ತಿಮ್ಮಪ್ಪ, ಶಂಕರಮೂರ್ತಿ   

ಶಿರಸಿ: ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಭಾರತಿ ದಂಪತಿ ಪುತ್ರಿ ಜಯಲಕ್ಷ್ಮಿ–ಆದಿತ್ಯ ಅವರ ಮದುವೆ ಆರತಕ್ಷತೆ ಕಾರ್ಯಕ್ರಮವು ಮಂಗಳವಾರ ತಾಲ್ಲೂಕಿನ ಗೋಳಿ ಸಿದ್ಧಿವಿನಾಯಕ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆಯಿತು.

ದೇವಾಲಯದ ಆವರಣದಲ್ಲಿ ಬೃಹತ್ ಶಾಮಿಯಾನ ಹಾಕಿ ಮಧ್ಯಾಹ್ನದ ಭೋಜನ ವ್ಯವಸ್ಥೆಗೊಳಿಸಲಾಗಿತ್ತು. ಮಠಾಧೀಶರು, ಪಕ್ಷದ ಕಾರ್ಯಕರ್ತರು, ಸಹಸ್ರಾರು ಜನರು ಪಾಲ್ಗೊಂಡರು.

ಉಪಮುಖ್ಯಮಂತ್ರಿ ಸಿ.ಎನ್.ಆಶ್ವತ್ಥನಾರಾಯಣ, ಸಚಿವರಾದ ಸುರೇಶಕುಮಾರ್, ಕೆ.ಎಸ್.ಈಶ್ವರಪ್ಪ, ಆರ್.ಅಶೋಕ, ಕಾಂಗ್ರೆಸ್ ಮುಖಂಡರಾದ ಕಾಗೋಡು ತಿಮ್ಮಪ್ಪ, ಆರ್.ವಿ.ದೇಶಪಾಂಡೆ, ಯು.ಟಿ.ಖಾದರ್, ಹಲವಾರು ಶಾಸಕರು, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.