ಕಾರವಾರ: ‘ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಂದ ಭರವಸೆ ಸಿಕ್ಕಿದೆ. ಈ ಸಂಬಂಧ ಹೆಚ್ಚಿನ ಆದ್ಯತೆ ತೋರಿ ಕ್ರಮ ವಹಿಸುವಂತೆ ತಮ್ಮ ಆಪ್ತ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ’ ಎಂದು ಶಾಸಕಿ ರೂಪಾಲಿ ನಾಯ್ಕ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಆಧುನಿಕ ತಂತ್ರಜ್ಞಾನಗಳಿರುವ ಆಸ್ಪತ್ರೆಯೊಂದನ್ನು ಜಿಲ್ಲೆಯಲ್ಲಿ ನಿರ್ಮಾಣ ಮಾಡುವಂತೆ ಮುಖ್ಯಮಂತ್ರಿಗೆಶುಕ್ರವಾರ ಬೆಂಗಳೂರಿನಲ್ಲಿ ಮನವಿ ನೀಡಿದ್ದೆ.ಜಿಲ್ಲೆಗೆ ಸುಸಜ್ಜಿತ ಆಸ್ಪತ್ರೆಯ ಅಗತ್ಯದ ಬಗ್ಗೆ ಅವರಿಗೆ ವಿವರಿಸಿದ್ದೆ. ಅಲ್ಲದೇ ಆರೋಗ್ಯ ಇಲಾಖೆ ಮತ್ತು ಜಿಲ್ಲಾಧಿಕಾರಿ ಕಚೇರಿಯಿಂದಲೂ ಮುಖ್ಯಮಂತ್ರಿ ಕಾರ್ಯಾಲಯಕ್ಕೆ ಪತ್ರ ಕಳುಹಿಸಲಾಗಿದೆ. ಇದಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ’ ಎಂದು ಅವರು ಮಾಹಿತಿ ನೀಡಿದರು.
ಇದನ್ನೂ ಓದಿ...ಉತ್ತರ ಕನ್ನಡ: ತೀವ್ರಗೊಂಡ ಸುಸಜ್ಜಿತ ಆಸ್ಪತ್ರೆ ಅಭಿಯಾನ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.