ಕಾರವಾರ: ‘ರಾಷ್ಟ್ರೀಯ ಸೇವಾ ಯೋಜನೆ ಶಿಬಿರವು ವಿದ್ಯಾರ್ಥಿಗಳ ಕ್ರಿಯಾಶೀಲ ವ್ಯಕ್ತಿತ್ವ ಹೊರಹೊಮ್ಮಲು ಸೂಕ್ತ ವೇದಿಕೆ’ ಎಂದು ದಿವೇಕರ ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಕೇಶವ ಕೆ.ಜಿ ಹೇಳಿದರು.
ಇಲ್ಲಿನ ಸರ್ವೋದಯ ನಗರದ ಸರ್ಕಾರಿ ಶಾಲೆಯಲ್ಲಿ ಕಾಲೇಜಿನ ಎನ್ಎಸ್ಎಸ್ ಘಟಕವು ಹಮ್ಮಿಕೊಂಡಿದ್ದ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ದಿವೇಕರ ಪಿಯು ಕಾಲೇಜಿನ ಪ್ರಾಚಾರ್ಯೆ ಲಲಿತಾ ಶೆಟ್ಟಿ ಮಾತನಾಡಿ, ‘ಎನ್ಎಸ್ಎಸ್ ಶಿಬಿರವು ವಿದ್ಯಾರ್ಥಿಗಳಿಗೆ ಸಮಾಜ ಸೇವಾ ಮನೋಭಾವನೆ ಬೆಳೆಯುವಂತೆ ಮಾಡುವ ಜೊತೆಗೆ ಶಿಸ್ತು ಕಲಿಸುತ್ತದೆ’ ಎಂದರು.
ಪ್ರಾಧ್ಯಾಪಕ ಬಿ.ಆರ್.ತೊಳೆ, ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಹರೀಶ್ ಕಾಮತ್, ಸಹ ಶಿಬಿರ ಅಧಿಕಾರಿಗಳಾದ ಅನಿತಾ ತೀಲ್ವೇ, ಸುರೇಶ ಗುಡಿಮನಿ, ರಾಜೇಶ ಮರಾಠಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.