ADVERTISEMENT

ಉತ್ತರ ಕನ್ನಡ ಜಿಲ್ಲೆ ವಿಭಜನೆಯ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಸಚಿವೆ ಜೊಲ್ಲೆ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2019, 15:02 IST
Last Updated 1 ನವೆಂಬರ್ 2019, 15:02 IST
ಯಲ್ಲಾಪುರ ಪಟ್ಟಣದ ಅರನ್ಯ ಇಲಾಕೆಯ ಪ್ರವಾಸಿ ಮಂದಿರದಲ್ಲಿ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಪತ್ರಕರ್ತರೊಂದಿಗೆ ಮಾತನಾಡಿದರು.
ಯಲ್ಲಾಪುರ ಪಟ್ಟಣದ ಅರನ್ಯ ಇಲಾಕೆಯ ಪ್ರವಾಸಿ ಮಂದಿರದಲ್ಲಿ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಪತ್ರಕರ್ತರೊಂದಿಗೆ ಮಾತನಾಡಿದರು.   

ಯಲ್ಲಾಪುರ: ‘ಉತ್ತರ ಕನ್ನಡ ಜಿಲ್ಲೆಯನ್ನು ವಿಭಜಿಸಿ ಎರಡು ಜಿಲ್ಲೆಗಳನ್ನಾಗಿ ಮಾಡುವ ಯಾವುದೇ ಪ್ರಸ್ತಾಪ ಇದುವರೆಗೂ ಸರ್ಕಾರದ ಮುಂದೆ ಇಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟಪಡಿಸಿದರು.

ಪಟ್ಟಣದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ರಚನೆಯ ಬಗ್ಗೆ ವದಂತಿಗೆ ಸ್ಪಷ್ಟನೆ ನೀಡಿದರು.

‘ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಶೇ 50ರಷ್ಟು ಹುದ್ದೆಗಳು ಖಾಲಿ ಇವೆ. ಅವುಗಳನ್ನು ಕೂಡಲೇ ಭರ್ತಿ ಮಾಡಿಕೊಳ್ಳಲಾಗುವುದು. ಈ ಇಲಾಖೆಯಲ್ಲಿ ‘ಡಿ’ ದರ್ಜೆ ನೌಕರರಿಂದ ಮೇಲಧಿಕಾರಿಯವರೆಗೂ ಬಹಳ ವರ್ಷಗಳಿಂದಬಡ್ತಿ ನೀಡಿಲ್ಲ. ಅವರಿಗೆ ಬಡ್ತಿ ನೀಡಲಾಗುವುದು’ ಎಂದು ಭರವಸೆ ನೀಡಿದರು.

ADVERTISEMENT

ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಭವ್ಯಾ ಶೆಟ್ಟಿ, ಮುಖಂಡರಾದ ಪ್ರಮೋದ ಹೆಗಡೆ, ಗೋಪಾಲಕೃಷ್ಣ ಹಂಡ್ರಮನೆ, ಪಟ್ಟಣ ಪಂಚಾಯ್ತಿ ಸದಸ್ಯ ಸೋಮೇಶ್ವರ ನಾಯ್ಕ, ಧೀರಜ ತಿನ್ನೇಕರ ಸಚಿವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕಿ ರೂಪಾಲಿ ನಾಯ್ಕ, ವಾಯವ್ಯಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್.ಪಾಟೀಲ, ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೊಹಮ್ಮದ್ ರೋಶನ್, ಉಪ ವಿಭಾಗಾಧಿಕಾರಿಈಶ್ವರ ಉಳ್ಳಾಗಡ್ಡಿ, ತಹಶೀಲ್ದಾರ್ ಎಚ್.ವಿಶ್ವನಾಥ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.