ಕುಮಟಾ: ರೋಟರಿ ಸಂಸ್ಥೆಯ ಜಿಲ್ಲಾ ಗವರ್ನರ್ ಆಗಿದ್ದ ದಿವಂಗತ ವಿಷ್ಣು ಕಾಮತ್ ನೆನಪಿನಲ್ಲಿ ಅವರ ಪತ್ನಿ ಹಾಗೂ ಸ್ಥಳೀಯ ರೋಟರಿ ಕ್ಲಬ್ ಮಾಜಿ ಅಧ್ಯಕ್ಷೆ ಜಯಶ್ರೀ ಕಾಮತ್ ಅವರು ಸ್ವಂತ ಖರ್ಚಿನಲ್ಲಿ ಎಚ್.ಐ.ವಿ. ಹಾಗೂ ಕ್ಷಯ ರೋಗ ಪೀಡಿತರಿಗೆ ಸುಮಾರು ₹25 ಸಾವಿರ ಮೌಲ್ಯದ ಪೌಷ್ಟಿಕ ಆಹಾರದ ಕಿಟ್ ವಿತರಿಸಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಆಜ್ಞಾ ನಾಯಕ ಮಾತನಾಡಿದರು.
ಆರೋಗ್ಯ ಇಲಾಖೆಯಿಂದ ದಾನಿ ಜಯಶ್ರೀ ಕಾಮತ್ ಅವರನ್ನು ಗೌರವಿಸಲಾಯಿತು. ರೋಟರಿ ಕ್ಲಬ್ ಅಧ್ಯಕ್ಷ ಅತುಲ್ ಕಾಮತ್, ಕಾರ್ಯದರ್ಶಿ ವಿನಾಯಕ ಹೆಗಡೆ ಹಾಗೂ ಪದಾಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.