ADVERTISEMENT

ಕರ್ತವ್ಯ ನಿರತ ಎ.ಎಸ್.ಐ ಹೃದಯಾಘಾತದಿಂದ ನಿಧನ

​ಪ್ರಜಾವಾಣಿ ವಾರ್ತೆ
Published 26 ಜನವರಿ 2022, 14:20 IST
Last Updated 26 ಜನವರಿ 2022, 14:20 IST
ಅಬ್ದುಲ್ ಖಾದರ್ ಮಹ್ಮದ್ ಶೇಖ್
ಅಬ್ದುಲ್ ಖಾದರ್ ಮಹ್ಮದ್ ಶೇಖ್   

ಕಾರವಾರ: ನಗರದ ಸಂಚಾರ ಪೊಲೀಸ್ ಠಾಣೆಯ ಎ.ಎಸ್.ಐ ಅಬ್ದುಲ್ ಖಾದರ್ ಮಹ್ಮದ್ ಶೇಖ್ (58), ಬುಧವಾರ ಕರ್ತವ್ಯ ನಿರತರಾಗಿದ್ದಾಗ ಹೃದಯಾಘಾತದಿಂದ ನಿಧನರಾದರು. ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರರಿದ್ದಾರೆ.

ಗಣರಾಜ್ಯೋತ್ಸವದ ಅಂಗವಾಗಿ ಬೆಳಿಗ್ಗೆ 8.30ರಕ್ಕೆ ಸಂಚಾರ ಪೊಲೀಸ್ ಠಾಣೆ ಎದುರು ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಠಾಣೆಗೆ ತೆರಳಿದ್ದರು. ಅಲ್ಲಿ ಏಕಾಏಕಿ ಕುಸಿದು ಬಿದ್ದರು. ತಕ್ಷಣ ಅವರನ್ನು ನಗರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು ಎಂದು ಸಂಚಾರ ಠಾಣೆಯ ಇನ್‌ಸ್ಪೆಕ್ಟರ್ ನಾಗಪ್ಪ ತಿಳಿಸಿದ್ದಾರೆ.

ಕಾರವಾರದ ನಿವಾಸಿಯಾಗಿದ್ದ ಅವರು, 1992ರ ಡಿ.23ರಂದು ಪೊಲೀಸ್ ಕಾನ್‌ಸ್ಟೆಬಲ್ ಆಗಿ ವೃತ್ತಿ ಆರಂಭಿಸಿದರು. ಕುಮಟಾ, ದಾಂಡೇಲಿ ಗ್ರಾಮೀಣ, ದಾಂಡೇಲಿ ನಗರ, ಜೊಯಿಡಾ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. 2019ರ ಜುಲೈ 7ರಂದು ಎ.ಎಸ್.ಐ ಆಗಿ ಬಡ್ತಿ ಹೊಂದಿ, ಕಾರವಾರ ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.