ADVERTISEMENT

ಮಹಾರಾಷ್ಟ್ರದಿಂದ ಪಾಸ್ ಇಲ್ಲದೆ ನಗರಕ್ಕೆ ಬಂದಿದ್ದ ಇಬ್ಬರಲ್ಲಿ ಒಬ್ಬ ಪರಾರಿ

​ಪ್ರಜಾವಾಣಿ ವಾರ್ತೆ
Published 21 ಮೇ 2020, 9:03 IST
Last Updated 21 ಮೇ 2020, 9:03 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶಿರಸಿ:ಮಹಾರಾಷ್ಟ್ರದಿಂದ ಯಾವುದೇ ಪಾಸ್ ಇಲ್ಲದೆ ನಗರಕ್ಕೆ ಬಂದಿದ್ದ ಇಬ್ಬರು ಚಾಲಕರಲ್ಲಿ ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಇನ್ನೊಬ್ಬ ಬುಧವಾರ ರಾತ್ರಿ ಪರಾರಿಯಾಗಿದ್ದಾನೆ.

ಯೋಗೀಶ್ ಎಂಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರಿಬ್ಬರೂ ಇಲ್ಲಿನ ಬನವಾಸಿ ರಸ್ತೆಯ ದೀವಗಿ ವಾರ್ನರ್ ಫ್ಯಾಕ್ಟರಿಗೆ ಸೇರಿದ ಚಾಲಕರಾಗಿದ್ದಾರೆ.ಇವರು ದೀವಗಿ ಫ್ಯಾಕ್ಟರಿಗೆ ಸೇರಿದ ಸಹ್ಯಾದ್ರಿ ಕಾಲೊನಿಯ ಮನೆಯಲ್ಲಿ ತಂಗಿದ್ದರು.

ಕ್ವಾರಂಟೈನ್ ಕಡ್ಡಾಯವಾಗಿರುವ ಕಾರಣ ಇವರು, ಸ್ಥಳೀಯ ಆಡಳಿತಕ್ಕೆ ಮಾಹಿತಿ ನೀಡದೇ ತಪ್ಪಿಸಿಕೊಂಡಿದ್ದರು. ಆದರೆ, ಸ್ಥಳೀಯರು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ವಿಷಯ ತಿಳಿದ ಒಬ್ಬ ಚಾಲಕ ತಪ್ಪಿಸಿಕೊಂಡಿದ್ದಾನೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.