ADVERTISEMENT

ಪಡಿತರ ಪಡೆಯಲು ಜನದಟ್ಟಣಿ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2020, 14:02 IST
Last Updated 4 ಏಪ್ರಿಲ್ 2020, 14:02 IST
ಶಿರಸಿ ತಾಲ್ಲೂಕಿನ ದಾಸನಕೊಪ್ಪದಲ್ಲಿ ಪಡಿತರ ಪಡೆಯಲು ಸೇರಿರುವ ಜನರು
ಶಿರಸಿ ತಾಲ್ಲೂಕಿನ ದಾಸನಕೊಪ್ಪದಲ್ಲಿ ಪಡಿತರ ಪಡೆಯಲು ಸೇರಿರುವ ಜನರು   

ಶಿರಸಿ: ತಾಲ್ಲೂಕಿನ ಬದನಗೋಡ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಾಳಂಗಿಯಲ್ಲಿ ಪಡಿತರ ಪಡೆಯಲು ಬರುವ ಜನರು ಸಾಮಾಜಿಕ ಅಂತರ ಕಾಪಾಡುತ್ತಿಲ್ಲ. ಗುಂಪುಗುಂಪಾಗಿ ನಿಲ್ಲುವುದರಿಂದ ಕೊರೊನಾ ವೈರಸ್‌ನಂತಹ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಪಡಿತರ ಪಡೆಯಲು ಒಟಿಪಿ, ಬಯೊಮೆಟ್ರಿಕ್ ಬದಲಾಗಿ ಮನೆ–ಮನೆಗೆ ರೇಷನ್ ಸಾಮಗ್ರಿ ತಲುಪಿಸಲು ಕ್ರಮ ಕೈಗೊಳ್ಳಬೇಕು. ಆ ಮೂಲಕ ಜನದಟ್ಟಣಿ ತಪ್ಪಿಸಬೇಕು ಎಂದು ತಹಶೀಲ್ದಾರರನ್ನು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT