ಕಾರವಾರ: ಜಿಲ್ಲೆಯ ಅಂಚೆ ವಿಭಾಗದ 2022ನೇ ಸಾಲಿನ 4ನೇ ತ್ರೈಮಾಸಿಕ ಅಂಚೆ ಅದಾಲತ್ ಜೂನ್ 27ರಂದು ಬೆಳಿಗ್ಗೆ 11ಕ್ಕೆ ಇಲ್ಲಿನ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದೆ.
ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲ್ಲೂಕುಗಳ ವ್ಯಾಪ್ತಿಯಲ್ಲಿರುವ ಅಂಚೆ ಸೇವೆಗಳಿಗೆ ಸಂಬಂಧ ಪಟ್ಟ ಸಲಹೆ, ಸೂಚನೆ ಮತ್ತು ದೂರುಗಳು ಅಂಚೆ ಅದಾಲತ್ನಲ್ಲಿ ವಿಚಾರಣೆಗೆ ಎಂದು ಮೇಲ್ಬರಹ ಬರೆದು ಯಾವುದೇ ಅಂಚೆ ಕಚೇರಿಯಲ್ಲಿ ಸಲ್ಲಿಸಬಹುದು. ಇಂತಹ ಲಕೋಟೆಗೆ ಅಂಚೆ ವೆಚ್ಚ ಭರಿಸುವ ಅಗತ್ಯವಿಲ್ಲ. ದೂರು ಮತ್ತು ಸಲಹೆ ಸೂಚನೆಗಳನ್ನು ಅಂಚೆ ಅಧೀಕ್ಷಕರು, ಕಾರವಾರ ವಿಭಾಗ, ಕಾರವಾರ ಇವರ ಕಾರ್ಯಾಲಯಕ್ಕೆ ಜೂನ್ 26 ರ ಒಳಗೆ ತಲುಪುವಂತೆ ಕಳುಹಿಸಬೇಕು ಎಂದು ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.