ADVERTISEMENT

ಮೇಳಕ್ಕೆ ಅನುಮತಿ: ನಗರಸಭೆಕ್ರಮ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಜನವರಿ 2021, 8:02 IST
Last Updated 5 ಜನವರಿ 2021, 8:02 IST
ಬಿಜೆಪಿ ಕಾರ್ಯಕರ್ತರು ದಾಂಡೇಲಿ ನಗರಸಭೆ ಎದುರು ಪ್ರತಿಭಟನೆ ನಡೆಸಿದರು
ಬಿಜೆಪಿ ಕಾರ್ಯಕರ್ತರು ದಾಂಡೇಲಿ ನಗರಸಭೆ ಎದುರು ಪ್ರತಿಭಟನೆ ನಡೆಸಿದರು   

ದಾಂಡೇಲಿ: ಕೊರೊನಾ ಸೋಂಕಿನ ಎರಡನೇ ಅಲೆಯ ಭೀತಿ ಮತ್ತು ಸೋಂಕು ಇನ್ನೂ ಹೆಚ್ಚಾಗುವ ಸಾಧ್ಯತೆ ಇದ್ದು ಇಂತಹ ಸಂದರ್ಭದಲ್ಲಿ ನಗರದ ಅಂಬೇವಾಡಿ ಭಾಗದಲ್ಲಿ ಮಿನಿ ಸರ್ಕಸ್ ಮಾದರಿಯ ಮೇಳ ನಡೆಸಲು ನಗರಸಭೆಯಿಂದ ಪರವಾನಿಗೆ ನೀಡಿರುವದನ್ನು ವಿರೋಧಿಸಿ ಸ್ಥಳೀಯ ಬಿ.ಜೆ.ಪಿಯ ಘಟಕದವರು ನಗರಸಭೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಮನವಿ ಸ್ವೀಕರಿಸಿದ ನಗರಸಭೆಯ ಪ್ರಭಾರ ಪೌರಾಯುಕ್ತ ಶೈಲೇಶ ಪರಮಾನಂದ, ಕಾನೂನಿನಂತೆ ಕ್ರಮ
ಕೈಕೊಳ್ಳುವ ಭರವಸೆ ನೀಡಿದರು. ಬಿಜೆಪಿಯ ಕಾರ್ಯಕರ್ತರು ನಗರಸಭೆಯಲ್ಲಿ ಕಟ್ಟಡ ಪರವಾನಗಿ ನೀಡಲು ವಿಳಂಬ ಮಾಡುತ್ತಿರುವುದನ್ನು ಖಂಡಿಸಿದರು. ಪರವಾನಗಿ ವಿಳಂಬದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಆದಷ್ಟು ಬೇಗ ಕೆಲಸ ಆಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ನಗರಸಭೆಯ ವ್ಯಾಪ್ತಿಯಲ್ಲಿ ಇರುವ ಖಾಲಿ ಜಾಗಕ್ಕೆ ಬೇಲಿ ಹಾಕಿ ಅತಿಕ್ರಮಣ ತಡೆಯುವಂತೆ ಆಗ್ರಹಿಸಿದರು.

ADVERTISEMENT

ಬಿಜೆಪಿಯ ನಗರ ಘಟಕದ ಪ್ರಧಾನ ಕಾರ್ಯದರ್ಶಿ ಗುರು ಮಠಪತಿ, ಉಪಾಧ್ಯಕ್ಷ ರಮೇಶ ಹೊಸಮನಿ,
ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಸವರಾಜ ಕಲಶೆಟ್ಟಿ, ಯುವ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷ ಸುಧೀರ ಶೆಟ್ಟಿ,
ಬುದ್ದಿವಂತಗೌಡಾ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.