ADVERTISEMENT

ಕಾರವಾರದಲ್ಲಿ ಬಸ್ ಸಂಚಾರಕ್ಕೆ ಅಡ್ಡಿ: ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ 

​ಪ್ರಜಾವಾಣಿ ವಾರ್ತೆ
Published 9 ಜನವರಿ 2019, 2:53 IST
Last Updated 9 ಜನವರಿ 2019, 2:53 IST
   

ಕಾರವಾರ: ರಾಷ್ಟ್ರವ್ಯಾಪಿ ಮುಷ್ಕರದ ಎರಡನೇ ದಿನವಾದ ಬುಧವಾರ ನಗರದಲ್ಲಿ ಬಸ್ ಸಂಚಾರ ಆರಂಭವಾಗಿದೆ.

ಬಸ್ ನಿಲ್ದಾಣದ ಎದುರು ಸೇರಿದ ಸಿಐಟಿಯು ಕಾರ್ಯಕರ್ತರು ಬಸ್ ಗಳಿಗೆ ಅಡ್ಡ ನಿಂತರು. ಆಗ ಪೊಲೀಸರು ಮಧ್ಯಪ್ರವೇಶಿಸಿ ಬಸ್ ಸಂಚಾರ ತಡೆಯದಂತೆ ಮನವಿ ಮಾಡಿದರು. ಆದರೂ ಪ್ರತಿಭಟನಾಕಾರರು ಕೇಳಲಿಲ್ಲ. ಕೊನೆಗೆ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಪೊಲೀಸ್ ಬಸ್ ಗೆ ಹತ್ತಿಸಿ ಬೇರೆಡೆಗೆ ಕರೆದುಕೊಂಡು ಹೋದರು. ಪೊಲೀಸರ ಕ್ರಮಕ್ಕೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಳಿದಂತೆ, ಕಾರವಾರದಲ್ಲಿ ಅಂಗಡಿ ಮುಂಗಟ್ಟುಗಳ ಬಾಗಿಲು ತೆರೆಯಲಾಗುತ್ತಿದೆ. ಮಂಗಳವಾರವೂ ವಹಿವಾಟು ಸ್ಥಗಿತಗೊಂಡಿರಲಿಲ್ಲ. ಇಂದು ಶಾಲಾ ಕಾಲೇಜುಗಳೂ ತೆರೆದಿರಲಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.