ಶಿರಸಿ: ತಾಲ್ಲೂಕಿನಾದ್ಯಂತ ಬುಧವಾರ ಬೆಳಿಗ್ಗೆಯಿಂದ ಎಡೆಬಿಡದೇ ಮಳೆಯಾಗುತ್ತಿದೆ. ದಟ್ಟ ಮೋಡ ಕವಿದ ವಾತಾವರಣವು, ಇನ್ನೂ ಬೆಳಗಿನ ಜಾವದಂತೆ ಭಾಸವಾಗುತ್ತಿದೆ.
ಶಿರಸಿ-ಯಲ್ಲಾಪುರ ರಸ್ತೆಯ ರಾಜ್ಯ ಹೆದ್ದಾರಿಯಲ್ಲಿ ಯಲ್ಲಾಪುರ ನಾಕಾ ಸಮೀಪ ರಸ್ತೆ ಜಲಾವೃತಗೊಂಡಿದ್ದು, ವಾಹನ ಸವಾರರು ಪರಡಾದುವಂತಾಗಿದೆ.
'ರಸ್ತೆಯಲ್ಲಿ ನಿಂತಿರುವ ನೀರು ಮನೆಗಳಿಗೆ ನುಗ್ಗಬಹುದೆಂದು ರಾತ್ರಿಯಿಡೀ ನಿದ್ದೆಯಿಲ್ಲದೇ ಕಳೆದೆವು' ಎನ್ನುತ್ತಾರೆ ಅಲ್ಲಿನ ನಿವಾಸಿಗಳು.
ಗ್ರಾಮೀಣ ಭಾಗದಲ್ಲಿ ಹಳ್ಳಗಳು ಹರಿಯುತ್ತಿವೆ. ನಿರಂತರ ಸುರಿಯುತ್ತಿರುವ ಮಳೆಯಿಂದ ಮೈ ಕೊರೆಯುವ ಚಳಿಯ ಅನುಭವವಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.