ADVERTISEMENT

ಉತ್ತರ ಕನ್ನಡ: ವಿವಿಧೆಡೆ ಮಳೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2024, 14:29 IST
Last Updated 4 ಜನವರಿ 2024, 14:29 IST
   

ಕಾರವಾರ: ಜಿಲ್ಲೆಯ ವಿವಿಧೆಡೆ ಗುರುವಾರ ನಸುಕಿನ ಜಾವ ಕೆಲವು ತಾಸುಗಳವರೆಗೆ ಮಳೆ ಸುರಿಯಿತು. ಇದರಿಂದ ಕೊಯ್ಲು ಮಾಡಿಟ್ಟಿದ್ದ ಭತ್ತ, ಒಣಗಿಸಲು ಇಡಲಾದ ಅಡಿಕೆ ನೆನೆಯುವಂತಾಯಿತು.

ಜಿಲ್ಲೆಯಾದ್ಯಂತ ಇಡೀ ದಿನ ಮೋಡ ಕವಿದ ವಾತಾವರಣ ಇತ್ತು. ರಾತ್ರಿ ಸೆಖೆಯ ವಾತಾವರಣ ಉಂಟಾಗಿತ್ತು. ತಡರಾತ್ರಿಯ ಬಳಿಕ ಜಿಟಿ ಜಿಟಿ ಮಳೆ ಸುರಿಯಲಾರಂಭಿಸಿತು. ಕಾರವಾರ, ಅಂಕೋಲಾ, ಕುಮಟಾ ಸೇರಿ ಹಲವೆಡೆ ಬೆಳಕು ಹರಿಯುವವರೆಗೂ ಮಳೆ ಬಿದ್ದಿತ್ತು. ರಸ್ತೆಯಲ್ಲಿ ಕೆಸರು ನೀರು ನಿಂತು ಸಮಸ್ಯೆ ಉಂಟಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT