ADVERTISEMENT

ಸಮುದ್ರದಲ್ಲಿ ಮುಳುಗುತ್ತಿದ್ದ ಮುಂಬೈ ಮೂಲದ ಪ್ರವಾಸಿಗನ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2024, 14:26 IST
Last Updated 29 ಡಿಸೆಂಬರ್ 2024, 14:26 IST
ಗೋಕರ್ಣದ ಕುಡ್ಲೆ ಬೀಚಿನಲ್ಲಿ ನೀರಿನಲ್ಲಿ ಮುಳುಗುತ್ತಿದ್ದು, ರಕ್ಷಿಸಲ್ಪಟ್ಟ ಪ್ರವಾಸಿಗರು ಮತ್ತು ರಕ್ಷಿಸಿದ ಸಿಬ್ಬಂದಿಯೊಂದಿಗೆ.  
ಗೋಕರ್ಣದ ಕುಡ್ಲೆ ಬೀಚಿನಲ್ಲಿ ನೀರಿನಲ್ಲಿ ಮುಳುಗುತ್ತಿದ್ದು, ರಕ್ಷಿಸಲ್ಪಟ್ಟ ಪ್ರವಾಸಿಗರು ಮತ್ತು ರಕ್ಷಿಸಿದ ಸಿಬ್ಬಂದಿಯೊಂದಿಗೆ.     

ಗೋಕರ್ಣ: ಇಲ್ಲಿಯ ಕುಡ್ಲೆ ಬೀಚಿನ ಸಮುದ್ರದ ನೀರಿನಲ್ಲಿ ಮುಳುಗುತ್ತಿದ್ದ ಮುಂಬೈ ಮೂಲದ ಪ್ರವಾಸಿಗ, ಮಿತೇಶ್ ಕುಮಾರ್ (23) ಅವರನ್ನು ಭಾನುವಾರ ಮೈಸ್ಟಿಕ್ ಗೋಕರ್ಣ ಅಡ್ವೆಂಚರ್ಸ್ ಸಿಬ್ಬಂದಿ ರಕ್ಷಿಸಿದ್ದಾರೆ.

ಟ್ಟೂ ನಾಲ್ಕು ಜನ ಗೋಕರ್ಣ ಪ್ರವಾಸಕ್ಕೆ ಬಂದಿದ್ದರು. ಸಮುದ್ರದಲ್ಲಿ ಈಜಾಡುತ್ತಿರುವಾಗ ಮಿತೇಶ್ ಕುಮಾರ್ ಅಲೆಯ ಸುಳಿಗೆ ಸಿಲುಕಿ ಮುಳುಗುವ ಹಂತದಲ್ಲಿದ್ದರು. ಕೂಡಲೇ ಇದನ್ನು ಗಮನಿಸಿದ ಮೈಸ್ಟಿಕ್ ಗೋಕರ್ಣ ಅಡ್ವೆಂಚರ್ಸ್ ಸಿಬ್ಬಂದಿ ಸ್ಪೀಡ್ ಬೋಟ್ ಮೂಲಕ ಅವರನ್ನು ರಕ್ಷಿಸಿ ದಡಕ್ಕೆ ತಂದು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ಅವರಿಗೆ ಜೀವ ರಕ್ಷಕ ಸಿಬ್ಬಂದಿ ಸಹಾಯ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT