ಕಾರವಾರ: ಭದ್ರತೆ ಮತ್ತು ಸುರಕ್ಷತೆಯ ಬಗ್ಗೆ ಜನಜಾಗೃತಿ ಅಭಿಯಾನದ ಭಾಗವಾಗಿ ನಗರದಲ್ಲಿ ಮಂಗಳವಾರ, ‘ಸಾಗರ ಕಣ್ಗಾವಲು’ (ಸೀ ವಿಜಿಲ್) ಕಾರ್ಯಾಚರಣೆ ಹಮ್ಮಿಕೊಳ್ಳಲಾಯಿತು. ಪೊಲೀಸ್ ಇಲಾಖೆ, ಕರಾವಳಿ ಕಾವಲು ಪೊಲೀಸ್, ಭಾರತೀಯ ಕೋಸ್ಟ್ ಗಾರ್ಡ್ ಹಾಗೂ ನೌಕಾಪಡೆ ಸಿಬ್ಬಂದಿ ನಗರದ ಆಯಕಟ್ಟಿನ ಸ್ಥಳಗಳಲ್ಲಿ ಸಂಯುಕ್ತವಾಗಿ ತಪಾಸಣೆ ನಡೆಸಿದರು.
ಬೈತಖೋಲ್ ಬಂದರು ರಸ್ತೆಯ ಸಮೀಪ, ಕಾಳಿ ನದಿ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹಾಗೂ ಶಿರವಾಡದ ರೈಲು ನಿಲ್ದಾಣ ಹತ್ತಿರ ಬ್ಯಾರಿಕೇಡ್ಗಳನ್ನು ಅಳವಡಿಸಿ ನಾಕಾಬಂದಿ ಹಾಕಲಾಗಿತ್ತು. ನಗರ ಪ್ರವೇಶಿಸುವ ವಾಹನಗಳನ್ನು ತಪಾಸಣೆ ನಡೆಸಿ ಕಾರ್ಯಾಚರಣೆಯ ಮಾಹಿತಿಯನ್ನು ನೀಡಲಾಯಿತು.
ಬೆಳಿಗ್ಗೆಯಿಂದಲೇ ಆರಂಭವಾದ ಕಾರ್ಯಾಚರಣೆಯು ಸಂಜೆಯ ತನಕ ನಡೆಯಿತು. ಶಿರವಾಡದಲ್ಲಿ ‘ನಕಲಿ ಬಾಂಬ್’ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸುವ ಅಣಕು ಕಾರ್ಯಾಚರಣೆ ಕೈಗೊಳ್ಳಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.