ಭಟ್ಕಳ: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪಟ್ಟಣದ 69 ವರ್ಷದ ವ್ಯಕ್ತಿಯೊಬ್ಬರು ಶನಿವಾರ ತಡರಾತ್ರಿ ಮೃತಪಟ್ಟಿದ್ದಾರೆ. ಮರಣಾನಂತರ ಗಂಟಲು ದ್ರವವನ್ನುಪರೀಕ್ಷಿಸಿದಾಗಅವರಲ್ಲಿ ಕೋವಿಡ್ 19 ದೃಢಪಟ್ಟಿದೆ.
ಪಟ್ಟಣದ ಸುಲ್ತಾನ್ರಸ್ತೆ ನಿವಾಸಿಯಾಗಿರುವ ಅವರು,ಕೆಲವು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಅವರನ್ನು ಕುಟುಂಬದವರು ಶನಿವಾರ ರಾತ್ರಿ ಮುರ್ಡೇಶ್ವರದಸಮೀಪದಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಕರೆದುಕೊಂಡು ಬಂದಿದ್ದರು. ಆದರೆ, ರಾತ್ರಿ 12 ಗಂಟೆ ಸುಮಾರಿಗೆ ಉಸಿರಾಟದ ಸಮಸ್ಯೆ ಮತ್ತಷ್ಟುಬಿಗಡಾಯಿಸಿ ಮೃತಪಟ್ಟರು.
ಮೃತದೇಹದಗಂಟಲು ದ್ರವದ ಮಾದರಿಯನ್ನುಭಾನುವಾರ ಬೆಳಿಗ್ಗೆ ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರ ವರದಿಯು ಮಧ್ಯಾಹ್ನ ಬಂದಿದ್ದು, ಕೋವಿಡ್ 19 ದೃಡಪಟ್ಟಿದೆ. ಮೃತದೇಹವನ್ನು ಪಿ.ಪಿ.ಇ ಬ್ಯಾಗ್ನಲ್ಲಿ ಭದ್ರಪಡಿಸಿ ನಾಲ್ವರು ಪೌರ ಕಾರ್ಮಿಕರು ತೆಗೆದುಕೊಂಡು ಹೋದರು.ಕುಟುಂಬದ ನಾಲ್ವರು ಸದಸ್ಯರ ಸಮ್ಮುಖದಲ್ಲಿ, ಪೌರ ಸಮಾಧಿ ಮಾಡುವ ಸ್ಥಳದಲ್ಲಿ ಸೋಂಕು ನಿವಾರಕ ಸಿಂಪಡಿಸಿ ಅಂತ್ಯಕ್ರಿಯೆ ನಡೆಸಲಾಯಿತು. ಈ ಸಂದರ್ಭದಲ್ಲಿತಾಲ್ಲೂಕು ಆಡಳಿತ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಮತ್ತು ಪುರಸಭೆ ಅಧಿಕಾರಿಗಳೂ ಹಾಜರಿದ್ದರು.
‘ಮೃತರ ಕುಟುಂಬದವರು ಹಾಗೂ ಸಂಪರ್ಕದಲ್ಲಿದ್ದವರ ಮಾಹಿತಿ ಕಲೆ ಹಾಕಿ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗುತ್ತಿದೆ. ಮೃತರು ಇದ್ದ ಸುತ್ತಮುತ್ತಲಿನ ಪ್ರದೇಶವನ್ನು ಸೀಲ್ಡೌನ್ ಮಾಡಲಾಗುತ್ತದೆ’ ಎಂದು ಉಪ ವಿಭಾಗಾಧಿಕಾರಿ ಎಸ್.ಭರತ್ ‘ಪ್ರಜಾವಾಣಿ’ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.