ಗೋಕರ್ಣ: ಇಲ್ಲಿನಭದ್ರಕಾಳಿ ದೇವಸ್ಥಾನದ ಎದುರು ಹೂವು ಮಾರಾಟದ ಅಂಗಡಿಗೆ ಸೋಮವಾರ ಬೆಳಿಗ್ಗೆ ಆಕಸ್ಮಿಕ ಬೆಂಕಿತಗುಲಿ ಸಂಪೂರ್ಣ ಭಸ್ಮವಾಗಿದೆ.
ಹಲವಾರು ವರ್ಷಗಳಿಂದ ಇಲ್ಲಿ ಪುರೋಷತ್ತಮ ಪೈ ಎಂಬುವವರು ಹೂವು ಮಾರಾಟ ಮಾಡುತ್ತಿದ್ದರು. ಅಂಗಡಿಯಲ್ಲಿ ಪಟಾಕಿ, ಹಾಗೂಗ್ಯಾಸ್ ಸಿಲಿಂಡರ್ಗಳೂ ಇದ್ದವು ಎಂದು ತಿಳಿದುಬಂದಿದೆ. ಅಗ್ನಿ ಅವಘಡದಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿರುವುದಾಗಿ ಅಂದಾಜಿಸಲಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರು. ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.