ADVERTISEMENT

ಮಂಗನ ಕಾಯಿಲೆ; ಮೃತಪಟ್ಟವರ ಮನೆಗೆ ಶಾಸಕ ಭೇಟಿ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2024, 14:33 IST
Last Updated 9 ಮಾರ್ಚ್ 2024, 14:33 IST
ಸಿದ್ದಾಪುರದ ಜಿಡ್ಡಿ ಹಾಗೂ ಕಲ್ಲೂರಿನಲ್ಲಿ ಮಂಗನ ಕಾಯಿಲೆಯಿಂದ ಮೃತಪಟ್ಟವರ ಮನೆಗೆ ಶಾಸಕ ಭೀಮಣ್ಣ ನಾಯ್ಕ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು
ಸಿದ್ದಾಪುರದ ಜಿಡ್ಡಿ ಹಾಗೂ ಕಲ್ಲೂರಿನಲ್ಲಿ ಮಂಗನ ಕಾಯಿಲೆಯಿಂದ ಮೃತಪಟ್ಟವರ ಮನೆಗೆ ಶಾಸಕ ಭೀಮಣ್ಣ ನಾಯ್ಕ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು   

ಸಿದ್ದಾಪುರ: ತಾಲ್ಲೂಕಿನ ಜಿಡ್ಡಿ ಹಾಗೂ ಕಲ್ಲೂರಿನಲ್ಲಿ ಮಂಗನ ಕಾಯಿಲೆಯಿಂದ ಮೃತಪಟ್ಟವರ ಮನೆಗೆ ಶಾಸಕ ಭೀಮಣ್ಣ ನಾಯ್ಕ ಶನಿವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಜಿಡ್ಡಿ ಹಾಗೂ ಕಲ್ಲೂರಿನ ಮೃತರ ಮನೆಗೆ ತೆರಳಿ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ, ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಿ ಕೊಡುವುದಾಗಿ ಭರವಸೆ ನೀಡಿದರು.

ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ, ಪ್ರಮುಖರಾದ ಚಂದ್ರಕಾಂತ ನಾಯ್ಕ ಕಲ್ಲೂರ, ಶ್ರೀನಿವಾದ ಜಿಡ್ಡಿ, ಅಣ್ಣಪ್ಪ ನಾಯ್ಕ ಶಿರಳಗಿ, ಮತ್ತಿತರರು ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.