ಯಲ್ಲಾಪುರ: ತಾಲ್ಲೂಕಿನ ಪ್ರವಾಸಿ ತಾಣಗಳನ್ನು ನೋಡಲು ಬಂದಿದ್ದ ಹಾವೇರಿ ಪೊಲೀಸರ ವ್ಯಾನ್, ಮುಂಡಗೋಡ ರಸ್ತೆಯ ಕುಚಗಾಂವ್ ಬಳಿಯ ತಿರುವಿನಲ್ಲಿ ಶುಕ್ರವಾರ ಪಲ್ಟಿಯಾಗಿದ್ದರಿಂದ 16 ಜನ ಗಾಯಗೊಂಡಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಈ ಅವಘಡ ಸಂಭವಿಸಿದೆ. ಗಾಯಗೊಂಡವರಿಗೆ ಯಲ್ಲಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.
ಪೊಲೀಸ್ ಇಲಾಖೆಯ ಹಾವೇರಿಯ ಡಿ.ಪಿ.ಒ ಸಿಬ್ಬಂದಿ ತಮ್ಮ ಕುಟುಂಬ ಸಮೇತರಾಗಿ ಯಲ್ಲಾಪುರದ ಚಂದಗುಳಿ ಗಂಟೆ ಗಣಪತಿ, ಹಾಗೂ ಇತರ ಪ್ರವಾಸಿ ತಾಣಗಳಿಗೆ ಪ್ರವಾಸಕ್ಕೆ ಬಂದಿದ್ದರು. ವ್ಯಾನ್ನಲ್ಲಿ ಮಹಿಳೆಯರೂ ಸೇರಿದಂತೆ 20ಕ್ಕೂ ಹೆಚ್ಚು ಜನರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.