ಶಿರಸಿ: ಪ್ರಸ್ತುತ ವಿಧಾನ ಪರಿಷತ್ ಚುನಾವಣೆ ನಡೆದ ರೀತಿಯ ಬಗ್ಗೆ ಈ ಪ್ರಕ್ರಿಯೆಯಲ್ಲಿ ಪಾಲ್ಗೊಂಡವರೆಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಶುಕ್ರವಾರ ಮತದಾನ ಮಾಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಹಣ ಬಲದ ಮೇಲೆ ಪರಿಷತ್ ಚುನಾವಣೆ ನಡೆದಿರುವ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಧಾನ ಪರಿಷತ್ ದೇಗುಲವಿದ್ದಂತೆ. ಇಲ್ಲಿಗೆ ಸದಸ್ಯರಾಗಿ ಪ್ರವೇಶಿಸುವವರ ಜವಾಬ್ದಾರಿ, ಘನತೆ ಹೆಚ್ಚಿದೆ. ಇದೇ ಸ್ಥಿತಿ ಮುಂದುವರೆಯಬೇಕು ಕಲುಷಿತವಾಗಬಾರದು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಆತ್ಮವಿಮರ್ಶೆ ಮಾಡಿಕೊಂಡು ವ್ಯವಸ್ಥೆ ಸುಧಾರಣೆಗೆ ಪ್ರಯತ್ನಿಸಬೇಕು. ಈ ಕುರಿತು ಸೌಹಾರ್ದಯುತ ಚರ್ಚೆಗಳು ನಡೆಯಬೇಕು’ ಎಂದು ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.