ADVERTISEMENT

ಮೊಬೈಲ್ ಬಳಸದಂತೆ ಬುದ್ಧಿವಾದ: ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2022, 12:45 IST
Last Updated 20 ಸೆಪ್ಟೆಂಬರ್ 2022, 12:45 IST
ಆಯನ್ ಬಾಬು ಶೇಖ್
ಆಯನ್ ಬಾಬು ಶೇಖ್   

ಶಿರಸಿ: ಮೊಬೈಲ್ ಬಳಸದಂತೆ ಪೋಷಕರು ಬುದ್ಧಿವಾದ ಹೇಳಿದ್ದನ್ನು ಮನಸ್ಸಿಗೆ ಹಚ್ಚಿಕೊಂಡ ಇಲ್ಲಿನ ಪ್ರೊಗ್ರೆಸ್ಸಿವ್ ಪ್ರೌಢಶಾಲೆಯ ವಿದ್ಯಾರ್ಥಿ ಆಯನ್ ಬಾಬು ಶೇಖ್ (14) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಈತ ಎರಡು ದಿನಗಳಿಂದ ನಾಪತ್ತೆಯಾಗಿದ್ದ. ಶಾಲೆಯ ಮೈದಾನದಲ್ಲಿರುವ ಬಾವಿಯಲ್ಲಿ ಮಂಗಳವಾರ ಬಾಲಕನ ಶವ ದೊರೆತಿದೆ. ರಾಮನಬೈಲಿನಲ್ಲಿರುವ ಪೋಷಕರ ಮನೆಯಲ್ಲಿ ಉಳಿದಿದ್ದ ಈತನಿಗೆ ಮೊಬೈಲ್ ಹೆಚ್ಚು ಬಳಸದಂತೆ ಬುದ್ಧಿವಾದ ಹೇಳಿದ್ದರಿಂದ ಈತ ನೊಂದಿದ್ದ ಎಂದು ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT