ADVERTISEMENT

ವರ್ಧಂತಿ ಉತ್ಸವ: ರಕ್ತದಾನ ಮಾಡಿದ ಸ್ವರ್ಣವಲ್ಲಿಶ್ರೀ

​ಪ್ರಜಾವಾಣಿ ವಾರ್ತೆ
Published 9 ಜೂನ್ 2022, 13:52 IST
Last Updated 9 ಜೂನ್ 2022, 13:52 IST
ಸೋಂದಾ ಸ್ವರ್ಣವಲ್ಲಿ ಮಠದಲ್ಲಿ ಗುರುವಾರ ವರ್ಧಂತಿ ಉತ್ಸವದ ಅಂಗವಾಗಿ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಅವರು ರಕ್ತದಾನ ಮಾಡಿದರು
ಸೋಂದಾ ಸ್ವರ್ಣವಲ್ಲಿ ಮಠದಲ್ಲಿ ಗುರುವಾರ ವರ್ಧಂತಿ ಉತ್ಸವದ ಅಂಗವಾಗಿ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಅವರು ರಕ್ತದಾನ ಮಾಡಿದರು   

ಶಿರಸಿ: ತಾಲ್ಲೂಕಿನ ಸೋಂದಾ ಸ್ವರ್ಣವಲ್ಲಿ ಮಠದಲ್ಲಿ ಗುರುವಾರ ವರ್ಧಂತಿ ಉತ್ಸವ ಜರುಗಿದ್ದು, ಈ ವೇಳೆ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಅವರು ರಕ್ತದಾನ ಮಾಡಿದರು.

ಮಠದ ಸುಧರ್ಮ ಸಭಾಂಗಣದಲ್ಲಿ ಗ್ರಾಮಾಭ್ಯುದಯ ಸಂಸ್ಥೆ ಮತ್ತು ಇತರ ಸಂಘ–ಸಂಸ್ಥೆಗಳ ಸಹಯೋಗದೊಂದಿಗೆ ರಕ್ತದಾನ ಶಿಬಿರ ಮತ್ತು ಉಚಿತ ವೈದ್ಯಕೀಯ ತಪಾಸಣೆ ಶಿಬಿರ ನಡೆಯಿತು. ಪ್ರತಿ ವರ್ಷದಂತೆ ಈ ಬಾರಿಯೂ ಸ್ವಾಮೀಜಿ ರಕ್ತದಾನ ಮಾಡಿ ಮಾದರಿಯಾದರು.

ನೂರಾರು ಜನರು ವೈದ್ಯಕೀಯ ತಪಾಸಣೆಗೆ ಒಳಪಟ್ಟರು. ಇಪ್ಪತ್ತೈದಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದರು. ಮಠದಲ್ಲಿ ಪಾರಾಯಣ, ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.