ಹೊನ್ನಾವರ: ತಾಲ್ಲೂಕಿನ ಹಡಿನಬಾಳ ಸಮೀಪ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಗುರುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಕಾರೊಂದು ಸೇತುವೆಯಿಂದ ಕಂದಕಕ್ಕೆ ಉರುಳಿ ಬಿದ್ದಿದೆ. ಅವಘಡದಲ್ಲಿ ಕಾರಿನಲ್ಲಿದ್ದ ಒಬ್ಬ ಪ್ರಯಾಣಿಕ ಮೃತಪಟ್ಟಿದ್ದಾರೆ.
ಶಿವಮೊಗ್ಗದ ಔಷಧಿ ವ್ಯಾಪಾರಿ, ರಾಹುಲ್ ಪಾರೆಸಮಾಲ್ (32) ಮೃತರು. ಕಾರಿನಲ್ಲಿದ್ದ ಶಿವಮೊಗ್ಗದ ಕೆ.ಆರ್.ಪುರಂ ನಿವಾಸಿಗಳಾದ ಚೇತನ ಮೋಹನ ಲಾಲ್ ಹಾಗೂ ವಂದನಾ ಚೇತನ್, ನೇಹಾ ಗಾಯಗೊಂಡಿದ್ದಾರೆ.
ನಿರ್ಲಕ್ಷ್ಯದ ಕಾರು ಚಾಲನೆಯಿಂದ ಅಪಘಾತವಾಗಿದೆ ಎಂದು ಚೇತನ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.