ಯಲ್ಲಾಪುರ: ತಂಬಾಕು ಉತ್ಪನ್ನಗಳನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡುತ್ತಿದ್ದ 20ಕ್ಕೂ ಹೆಚ್ಚು ಅಂಗಡಿಗಳ ಮೇಲೆ ತಾಲ್ಲೂಕು ತಂಬಾಕು ತನಿಖಾದಳ ಮಂಗಳವಾರ ದಾಳಿ ನಡೆಸಿ, ₹ 2800 ದಂಡ ವಿಧಿಸಿದೆ.
ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ಮಾಡಲು ಅವಕಾಶ ನೀಡಬಾರದು. ಬಿಡಿಬಿಡಿಯಾಗಿ ಸಿಗರೇಟ್, ಬೀಡಿ ಮಾರಾಟ ಮಾಡಬಾರದು. 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನ ಮಾರಾಟ ಮಾಡಬಾರದು. ತಂಬಾಕು ಉತ್ಪನ್ನಗಳ ಜಾಹೀರಾತು ಪ್ರದರ್ಶಿಸಬಾರದು ಈ ಮೊದಲಾದ ವಿಷಯಗಳನ್ನು ಅಂಗಡಿಯವರಿಗೆ ಮನವರಿಕೆ ಮಾಡಿಕೊಡಲಾಯಿತು. ತಂಬಾಕು ಉತ್ಪನ್ನ ಮಾರಾಟ ಮಾಡಲು ಪರವಾನಗಿ ಪಡೆದಿರಬೇಕು ಎಂದು ತಿಳಿಸಲಾಯಿತು.
ತಹಶೀಲ್ದಾರ್ ತನುಜಾ ಸವದತ್ತಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ನರೆಂದ್ರ ಪವಾರ ದಾಳಿಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.