ADVERTISEMENT

ಮುರ್ಡೇಶ್ವರ: ಸಮುದ್ರದಲ್ಲಿ ಮುಳುಗಿ ಪ್ರವಾಸಿಗ ಸಾವು

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2019, 9:09 IST
Last Updated 22 ಸೆಪ್ಟೆಂಬರ್ 2019, 9:09 IST
   

ಭಟ್ಕಳ:ತಾಲ್ಲೂಕಿನ ಮುರ್ಡೇಶ್ವರಕ್ಕೆ ಭಾನುವಾರ ಬೆಳಿಗ್ಗೆ ಪ್ರವಾಸ ಬಂದಿದ್ದ ಬೆಂಗಳೂರಿನ ಮಲ್ಲೇಶ್ವರ ನಿವಾಸಿ ರಾಜು (30) ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

11 ಗೆಳೆಯರ ಜೊತೆ ಅವರು ಪ್ರವಾಸ ಬಂದಿದ್ದರು. ಸ್ನಾನಕ್ಕೆಂದು ಸಮುದ್ರಕ್ಕೆ ಇಳಿದ ಅವರು ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗಿದ್ದಾರೆ. ಮೀನುಗಾರರು ಮತ್ತು ಸಾರ್ವಜನಿಕರು ಕಾಪಾಡಲು ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ. ಮೃತದೇಹವನ್ನು ಆರ್.ಎನ್.ಎಸ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.