ADVERTISEMENT

ಕಾರವಾರ: ಸಮುದ್ರದಲ್ಲಿ ಮುಳುಗುತ್ತಿದ್ದ ಪ್ರವಾಸಿಗನ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2019, 9:23 IST
Last Updated 21 ಮಾರ್ಚ್ 2019, 9:23 IST
   

ಕಾರವಾರ: ಗೋಕರ್ಣದ ಕುಡ್ಲೆಯಲ್ಲಿ ಅರಬ್ಬಿ ಸಮುದ್ರದ ಸುಳಿಯಲ್ಲಿ ಸಿಲುಕಿದ್ದ ಪ್ರವಾಸಿಯೊಬ್ಬರನ್ನು ಲೈಫ್ ಗಾರ್ಡ್ ಸಿಬ್ಬಂದಿ ಗುರುವಾರ ರಕ್ಷಿಸಿದ್ದಾರೆ.

ಅಸ್ಸಾಂನ ರಾಹುಲ್ ಜಿತ್ ಕಲಿತ್ (21) ಎಂಬುವವರು ಸಮುದ್ರದಲ್ಲಿ ಈಜಲು ಇಳಿದಿದ್ದರು. ನೀರಿನಲ್ಲಿ ಮೇಲೆ ಬರಲಾಗದೇ ಒದ್ದಾಡುತ್ತಿದ್ದುದನ್ನು ಗಮನಿಸಿದ ಸಿಬ್ಬಂದಿ ಕೂಡಲೇ ಕಾರ್ಯಾಚರಣೆಗೆ ಇಳಿದರು. ಪ್ರವಾಸಿಯನ್ನು ರಕ್ಷಿಸಿ ದಡಕ್ಕೆ ಕರೆದುಕೊಂಡು ಬಂದರು.

ರಾಹುಲ್, ತಮ್ಮ ಮೂವರು ಗೆಳೆಯರ ಜತೆ ಪ್ರವಾಸ ಬಂದಿದ್ದರು.

ADVERTISEMENT

ಕಾರ್ಯಾಚರಣೆಯಲ್ಲಿ ಸಿಬ್ಬಂದಿ ಸಂಜೀವ್ ಹೊಸ್ಕಟ್ಟ, ನಿತ್ಯಾನಂದ ಹರಿಕಂತ್ರ ಹಾಗೂ 'ಪ್ರವಾಸಿ ಮಿತ್ರ' ಕೇಶವ.ಎಂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.