ADVERTISEMENT

ನಿಷ್ಠಾವಂತ ಸದಸ್ಯರಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2019, 13:16 IST
Last Updated 16 ನವೆಂಬರ್ 2019, 13:16 IST
ಸಹಕಾರಿ ಸಪ್ತಾಹದ ಅಂಗವಾಗಿ ಶಿರಸಿ ಟಿಎಸ್‌ಎಸ್‌ನಲ್ಲಿ ಜಾಲಿಮನೆಯ ತ್ರಯಂಬಕ ಹೆಗಡೆ ಅವರನ್ನು ಸನ್ಮಾನಿಸಲಾಯಿತು
ಸಹಕಾರಿ ಸಪ್ತಾಹದ ಅಂಗವಾಗಿ ಶಿರಸಿ ಟಿಎಸ್‌ಎಸ್‌ನಲ್ಲಿ ಜಾಲಿಮನೆಯ ತ್ರಯಂಬಕ ಹೆಗಡೆ ಅವರನ್ನು ಸನ್ಮಾನಿಸಲಾಯಿತು   

ಶಿರಸಿ: ಸಹಕಾರಿ ಸಪ್ತಾಹದ ಅಂಗವಾಗಿ ಇಲ್ಲಿನ ಟಿಎಸ್‌ಎಸ್‌ನಲ್ಲಿ 54 ಹಿರಿಯ ನಿಷ್ಠಾವಂತ ಸದಸ್ಯರನ್ನು ಶನಿವಾರ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಚೆನ್ನಗಿರಿ ತುಮ್ಕೋಸ್ ಅಧ್ಯಕ್ಷ ಎಚ್.ಎಸ್.ಶಿವಕುಮಾರ ಮಾತನಾಡಿ, ‘ಅಡಿಕೆ ‌ಬೆಳೆಗಾರರ ಹಿತಕಾಯುವಲ್ಲಿ ಟಿಎಸ್‌ಎಸ್‌ ಪಾತ್ರ ಮಹತ್ವದ್ದಾಗಿದೆ. ಸಹಕಾರಿ ಸಂಘ ಸದಸ್ಯರ ಏಳ್ಗೆಗೆ ಶ್ರಮಿಸುತ್ತಿರುವುದು ಮಾದರಿ ಕಾರ್ಯ’ ಎಂದರು. ಟಿಎಸ್‌ಎಸ್ ಅಧ್ಯಕ್ಷ ಶಾಂತಾರಾಮ ಹೆಗಡೆ ಶೀಗೇಹಳ್ಳಿ ಅಧ್ಯಕ್ಷತೆ ವಹಿಸಿದ್ದರು. ಶಿವಮೊಗ್ಗ ಮ್ಯಾಮ್ಕೋಸ್ ಉಪಾಧ್ಯಕ್ಷ ವೈ.ಎಸ್.ಸುಬ್ರಹ್ಮಣ್ಯ, ಸಂಘದ ನಿರ್ದೇಶಕರಾದ ರಾಮಕೃಷ್ಣ ಹೆಗಡೆ ಕಡವೆ, ಶಶಾಂಕ ಹೆಗಡೆ, ಪ್ರಧಾನ ವ್ಯವಸ್ಥಾಪಕ ರವೀಶ ಹೆಗಡೆ ಇದ್ದರು. ಇದೇ ಸಂದರ್ಭದಲ್ಲಿ ಸುಪರ್ ಮಾರ್ಕೆಟ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT