ಹಳಿಯಾಳ: ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದ ತಾಲ್ಲೂಕಿನ 23 ಮಂದಿ ಈಚೆಗೆ ಹಿಂದೂ ಧರ್ಮವನ್ನು ಪುನಃ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಅವರನ್ನು ಸ್ವಾಗತಿಸಲಾಯಿತು.
ಪಟ್ಟಣದ ಗಣೇಶ ಕಲ್ಯಾಣ ಮಂಟಪದಲ್ಲಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಅನಂತಕುಮಾರ ಹೆಗಡೆ, ‘ನಾವು ಯಾವ ಧರ್ಮದಲ್ಲಿ ಜನ್ಮ ತಾಳಿದ್ದೇವೆಯೋ ಆ ಧರ್ಮದ ಸೇವೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ’ ಎಂದರು.
ಮಾಜಿ ಶಾಸಕ ಸುನೀಲ ಹೆಗಡೆ ಮಾತನಾಡಿ, ‘ಘರ್ ವಾಪಸಿ ಧಾರ್ಮಿಕ ಕಾರ್ಯಕ್ರಮವು ಯಾವುದೇ ರಾಜಕೀಯ ಗಿಮಿಕ್ ಅಲ್ಲ. ಯಾವ ಧರ್ಮದಲ್ಲಿ ಹುಟ್ಟಿದ್ದೇವೆಯೋ ಆ ಧರ್ಮವನ್ನು ಪರಿಪಾಲನೆ ಮಾಡಬೇಕು. ಹಿಂದೂ ಧರ್ಮವನ್ನು ಉಳಿಸಿ ಬೆಳೆಸಿಕೊಂಡು ಸಾಗುವುದರ ಜೊತೆಗೆ ಸ್ವ ಧರ್ಮ ನಿಷ್ಠೆ, ಪರಧರ್ಮ ಸಹಿಷ್ಣುತೆ ಪ್ರತಿಯೊಬ್ಬರಲ್ಲೂ ಇರಬೇಕು’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.