ಶಿರಸಿ: ನಗರದ ಹೊರವಲಯದ ಎಸಳೆಯಲ್ಲಿರುವ ಕೆರೆಗೆ ಆಟವಾಡಲು ತೆರಳಿದ್ದ ಇಬ್ಬರು ಬಾಲಕರು ಶನಿವಾರ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಕಸ್ತೂರಬಾ ನಗರದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಾಗಿದ್ದ ಇಮಾಮ್ ಖಾಸಿಮ್ ಪಾಳಾ (13), ಅಹ್ಮದ್ ರಜಾಕ್ ಜನ್ನಿಗೇರಿ (14) ಮೃತರು.
‘ನಾಲ್ವರು ಸ್ನೇಹಿತರು ಆಟವಾಡಲು ತೆರಳಿದ್ದರು. ಈ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿದ್ದರು. ಉಳಿದ ಬಾಲಕರು ಸಹಾಯಕ್ಕಾಗಿ ಅರಚಿದಾಗ ಅಕ್ಕಪಕ್ಕದಲ್ಲಿದ್ದ ಜನರಿಗೆ ದುರ್ಘಟನೆ ತಿಳಿಯಿತು. ಜನರು ಧಾವಿಸುವಷ್ಟರಲ್ಲಿ ಇಬ್ಬರು ಮೃತಪಟ್ಟಿದ್ದರು. ಅಗ್ನಿಶಾಮಕ ಸಿಬ್ಬಂದಿ ಸಹಾಯದೊಂದಿಗೆ ಶವ ಹೊರಕ್ಕೆ ತೆಗೆಯಲಾಗಿದೆ’ ಎಂದು ಗ್ರಾಮೀಣ ಠಾಣೆ ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.