ಹೊನ್ನಾವರ: ತಾಲ್ಲೂಕಿನಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಮಳೆಯ ಪ್ರಮಾಣ ಗುರುವಾರ ಇಳಿಮುಖವಾಗಿದೆ.
ಮಳೆಯಿಂದ ಕೃಷಿ ಚಟುವಟಿಕೆ ಚುರುಕುಗೊಂಡಿರುವುದು ಒಂದೆಡೆಯಾದರೆ ಇನ್ನೊಂದೆಡೆ ಸಾರ್ವಜನಿಕರ ಆಸ್ತಿ ಹಾನಿಯೂ ಸಂಭವಿಸಿದೆ.
‘ಬುಧವಾರ ವಂದೂರಿನ ಮಹಾಬಲೇಶ್ವರ ವೆಂಕಟರಮಣ ಹೆಗಡೆ ಅವರ ಮನೆ ಮೇಲೆ ತೆಂಗಿನಮರ ಮುರಿದು ಬಿದ್ದಿದೆ ಹಾಗೂ ಸಂಶಿ ಕುದ್ರಗಿಯ ಸುಕ್ರಿ ಸಾಂತ ಹಳ್ಳೇರ ಅವರ ಮನೆ ಕುಸಿದು ಹಾನಿ ಸಂಭವಿಸಿದೆ’ ಎಂದು ಸ್ಥಳಕ್ಕೆ ಭೇಟಿ ನೀಡಿ ಸಮೀಕ್ಷೆ ನಡೆಸಿರುವ ಕಂದಾಯ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.