ADVERTISEMENT

ಉತ್ತರ ಕನ್ನಡ | ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ದೀಪನ್ ನೇಮಕ

​ಪ್ರಜಾವಾಣಿ ವಾರ್ತೆ
Published 15 ಜುಲೈ 2025, 3:14 IST
Last Updated 15 ಜುಲೈ 2025, 3:14 IST
<div class="paragraphs"><p>ದೀಪನ್ ಎಂ.ಎನ್</p></div>

ದೀಪನ್ ಎಂ.ಎನ್

   

ಕಾರವಾರ: ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಷದ ಹಿಂದೆ ಅಧಿಕಾರ ವಹಿಸಿಕೊಂಡಿದ್ದ ಎಂ.ನಾರಾಯಣ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.

ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ 2019ರ ಬ್ಯಾಚಿನ ಐಪಿಎಸ್ ಅಧಿಕಾರಿ ದೀಪನ್ ಎಂ.ಎನ್ ಅವರನ್ನು ನೇಮಿಸಲಾಗಿದೆ. ಸದ್ಯ ಅವರು ರಾಜ್ಯ ಮೀಸಲು ಪೊಲೀಸ್ ಪಡೆಯ 1ನೇ ಬೆಟಾಲಿಯನ್ ಕಮಾಂಡೆಂಟ್ ಆಗಿದ್ದರು.

ADVERTISEMENT

ಎಂ.ನಾರಾಯಣ ಅವರನ್ನು ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಯ ಡಿಸಿಪಿ ಹುದ್ದೆಗೆ ನಿಯೋಜಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.