ADVERTISEMENT

ಯಕ್ಷಗಾನ ಒಗ್ಗಟ್ಟಿನ ಕಲೆ: ಡಾ.ಜಿ.ಎಲ್.ಹೆಗಡೆ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2022, 13:48 IST
Last Updated 27 ಫೆಬ್ರುವರಿ 2022, 13:48 IST
ಸೃಪ್ಟಿ ಕಲಾಪ ಸಂಸ್ಥೆಯ ಪ್ರಥಮ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ಜಿ.ಎಲ್. ಹೆಗಡೆ, ಹಾಸ್ಯ ‌ಲೇಖಕಿ ಭುವನೇಶ್ವರಿ ಹೆಗಡೆ, ಸೃಷ್ಟಿ‌ ಕಲಾಪದ ಗುರು ಸುಬ್ರಾಯ‌ ಹೆಗಡೆ‌ ಕೆರೆಕೊಪ್ಪ, ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆ ಅವರನ್ನು ಸನ್ಮಾನಿಸಲಾಯಿತು
ಸೃಪ್ಟಿ ಕಲಾಪ ಸಂಸ್ಥೆಯ ಪ್ರಥಮ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ಜಿ.ಎಲ್. ಹೆಗಡೆ, ಹಾಸ್ಯ ‌ಲೇಖಕಿ ಭುವನೇಶ್ವರಿ ಹೆಗಡೆ, ಸೃಷ್ಟಿ‌ ಕಲಾಪದ ಗುರು ಸುಬ್ರಾಯ‌ ಹೆಗಡೆ‌ ಕೆರೆಕೊಪ್ಪ, ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆ ಅವರನ್ನು ಸನ್ಮಾನಿಸಲಾಯಿತು   

ಶಿರಸಿ: ಯಕ್ಷಗಾನ ಒಗ್ಗಟ್ಟಿನ ಕಲೆಯಾಗಿದ್ದು, ಇಲ್ಲಿ ಯಾವ ಕಲಾವಿದರರನ್ನೂ ಅವಕಾಶ ವಂಚಿತರಾಗಿಸುವ ಪ್ರಮೇಯ ಎದುರಾಗದು ಎಂದು ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ಜಿ.ಎಲ್.ಹೆಗಡೆ ಹೇಳಿದರು.

ಇಲ್ಲಿನ ನಯನ ಸಭಾಂಗಣದಲ್ಲಿ ಭಾನುವಾರ ಸೃಷ್ಟಿ ಕಲಾಪ ಸಂಸ್ಥೆ ಆಯೋಜಿಸಿದ್ದ ಪ್ರಥಮ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಯಕ್ಷಗಾನದಲ್ಲಿ ಭಾಗವತರಿಗೂ ಮಿತಿ ಇದೆ. ಅವರ ಕೈಲಿ ಸೂತ್ರವೂ ಇದ್ದು, ಸೂತ್ರದ ಗೌರವವನ್ನು ಕಾಪಾಡಿಕೊಳ್ಳಬೇಕಿದೆ’ ಎಂದರು.

‘ಯಕ್ಷಗಾನದಲ್ಲಿ ಬಳಸುವ ಅತಿ ಸ್ವಾತಂತ್ರ್ಯ ಅಪಾಯಕಾರಿ ಹಾಗೂ ಅಮಲಾಗುತ್ತಿದೆ. ಕಲೆಯ ನೈಜ ಸೊಗಡು ಉಳಿದರೆ ಕನ್ನಡ ಭಾಷೆಯೂ ಉಳಿಯುತ್ತದೆ’ ಎಂದರು.

ADVERTISEMENT

ಹಾಸ್ಯ ಲೇಖಕಿ ಭುವನೇಶ್ವರಿ ಹೆಗಡೆ ಮಾತನಾಡಿ, ‘ಯಕ್ಷಗಾನ ಕಲೆ ಹೃದಯ ಶ್ರೀಮಂತಿಕೆ ಕೊಟ್ಟಿದೆ. ಭಾಷೆಯ ಶುದ್ದತೆ ನೀಡಿದೆ’ ಎಂದರು.

ಸೃಷ್ಟಿ ಕಲಾಪದ ಅಧ್ಯಕ್ಷೆ ವಿಜಯನಳಿನಿ ರಮೇಶ ಅಧ್ಯಕ್ಷತೆ ವಹಿಸಿದ್ದರು. ಸುಬ್ರಾಯ ಹೆಗಡೆ ಕೆರೆಕೊಪ್ಪ ಗುರು ವಂದನೆ ಸ್ವೀಕರಿಸಿದರು.

ಸುಮಾ ಗಡಿಗೆಹೊಳೆ ಪ್ರಾರ್ಥಿಸಿದರು. ಮಾನಸಾ ಹೆಗಡೆ ಸ್ವಾಗತಿಸಿದರು. ಶೈಲಜಾ ಗೋರ್ನಮನೆ ಪ್ರಾಸ್ತಾವಿಕ ಮಾತನಾಡಿದರು. ನಯನಾ ಹೆಗಡೆ, ಸಾವಿತ್ರಿ ಶಾಸ್ತ್ರಿ, ಭವಾನಿ ಭಟ್ಟ, ಗಾಯತ್ರಿ ಹೆಗಡೆ ಸನ್ಮಾನ ಪತ್ರ ವಾಚಿಸಿದರು. ರೋಹಿಣಿ ಹೆಗಡೆ ನಿರ್ವಹಿಸಿದರು. ದಾಕ್ಷಾಯಿಣಿ ಪಿಸಿ ವಂದಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.