ADVERTISEMENT

ಸಿದ್ದರಾಮಯ್ಯ ವಿರುದ್ಧ ಮಾನನಷ್ಟ ಮೊಕದ್ದಮೆ: ಯಡಿಯೂರಪ್ಪ ಚಿಂತನೆ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2019, 8:28 IST
Last Updated 28 ನವೆಂಬರ್ 2019, 8:28 IST
ಉತ್ತರ ಕನ್ನಡ ಜಿಲ್ಲೆ ಮುಂಡಗೋಡಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡರು.
ಉತ್ತರ ಕನ್ನಡ ಜಿಲ್ಲೆ ಮುಂಡಗೋಡಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡರು.   

ಶಿರಸಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅನರ್ಹ ಶಾಸಕರನ್ನು ಖರೀದಿಸಲಾಗಿದೆ ಎಂದು ಹೇಳುತ್ತಿದ್ದಾರೆ. ಅಗತ್ಯ ದಾಖಲೆ ಸಂಗ್ರಹಿಸಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು‌ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಮ‌ ಹೆಬ್ಬಾರ್ ಪರ ಮತಯಾಚಿಸಲು ಮುಂಡಗೋಡಿಗೆ ಭೇಟಿ‌ ನೀಡಿದ ಸಂದರ್ಭ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ,ಸಿದ್ದರಾಮಯ್ಯ ಬೇಜವಾಬ್ದಾರಿಯುತ ಹೇಳಿಕೆ‌ ನೀಡುವುದನ್ನು ನಿಲ್ಲಿಸಲಿ ಎಂದುಒತ್ತಾಯಿಸಿದರು.

ನ. 24ರಂದು ಬನವಾಸಿಯ ಪ್ರಚಾರ ಸಭೆಯಲ್ಲಿ‌ ಭಾಗವಹಿಸಿದ್ದ ಯಡಿಯೂರಪ್ಪ, ಚುನಾವಣೆ ಘೋಷಣೆಯಾದ ಮೇಲೆ ಎರಡನೇ ಬಾರಿಗೆ ಕ್ಷೇತ್ರಕ್ಕೆ ಪ್ರಚಾರಕ್ಕಾಗಿ ಬಂದಿದ್ದಾರೆ.

ADVERTISEMENT
ಮುಂಡಗೋಡಿನಲ್ಲಿ ಮುಖ್ಯಮಂತ್ರಿ ಬಂದಿಳಿದ ಹೆಲಿಕಾಪ್ಟರ್ ತಪಾಸಣೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.