ADVERTISEMENT

ಶಿರಸಿ: ಕೆರೆಯಲ್ಲಿ ಮುಳುಗಿ ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 23 ಜುಲೈ 2021, 10:17 IST
Last Updated 23 ಜುಲೈ 2021, 10:17 IST

ಶಿರಸಿ: ತುಂಬಿ ಹರಿಯುತ್ತಿದ್ದ ತಾಲ್ಲೂಕಿನ ದೊಡ್ನಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚೆನ್ನಾಪುರ ಕೆರೆಯ ಸೆಳೆತಕ್ಕೆ ಸಿಲುಕಿ ಯುವಕನೊಬ್ಬ ಮೃತಪಟ್ಟಿದ್ದು, ಶುಕ್ರವಾರ ಬೆಳಿಗ್ಗೆ ಶವ ಪತ್ತೆಯಾಗಿದೆ.

ಹುಸರಿ ಗ್ರಾಮದ ಗಂಗಾಧರ ತಿಮ್ಮ ಗೌಡ (28) ಮೃತ ಯುವಕ. ಬೈಕ್ ನಲ್ಲಿ ತೆರಳುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಕೆರೆಗೆ ಬಿದ್ದಿದ್ದ. ಸತತ ಕಾರ್ಯಾಚರಣೆ ಬಳಿಕ ಶವ ಪತ್ತೆ ಹಚ್ಚಿ ಹೊರಕ್ಕೆ ತೆಗೆಯಲಾಗಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.